ಈ ರೈಲು ಮಾರ್ಗದ ನಿರ್ಮಾಣದಿಂದ ಉತ್ತರ ಕರ್ನಾಟಕಕ್ಕೆ ಹೋಗಲು ತಗಲುವ ಸಮಯದಲ್ಲಿ ಸುಮಾರು ಮೂರು ಗಂಟೆಗಳಷ್ಟು ಕಡಿಮೆಯಾಗುತ್ತದೆ. ಬರಪೀಡಿತ ಜಿಲ್ಲೆ ಚಿತ್ರದುರ್ಗದಿಂದ ಬೆಂಗಳೂರಿಗೆ ನೇರ ರೈಲು ಮಾರ್ಗವಿಲ್ಲ. ಈ ಕೊರತೆಯನ್ನು ನೀಗಿಸುವ ಇಚ್ಛೆ ಸ್ಥಳೀಯ ಯಾವ ರಾಜಕಾರಣಿಯಲ್ಲೂ ಇದ್ದಂತಿಲ್ಲ. ಸರ್ಕಾರ ಈ ಬಗ್ಗೆ ಗಮನಹರಿಸಿ ಆದಷ್ಟು ಬೇಗ ತುಮಕೂರು, ಶಿರಾ, ಹಿರಿಯೂರು, ಚಿತ್ರದುರ್ಗ, ದಾವಣಗೆರೆ ರೈಲು ಮಾರ್ಗವನ್ನು ನಿರ್ಮಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು.