ನವದೆಹಲಿ: ಫೆಬ್ರುವರಿ ಅಂತ್ಯದ ವೇಳೆಗೆ ಕರಾವಳಿಯ ದಕ್ಷಿಣ ಕನ್ನಡ, ಕಾರವಾರ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಾದಯಾತ್ರೆ ಆಯೋಜಿಸುವ ಮೂಲಕ ಮತದಾರರ ಗಮನ ಸೆಳೆಯುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆ ಭಾಗದ ಸಂಸದರಿಗೆ ಸೂಚಿಸಿದ್ದಾರೆ.
ಗುರುವಾರ ಸಂಜೆ ರಾಜ್ಯದ ಬಿಜೆಪಿ ಸಂಸದರೊಂದಿಗೆ ಸಭೆ ನಡೆಸಿದ ಅವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದಿರುವ ಹಿಂದೂಗಳ ಹತ್ಯೆಯ ವಿಚಾರವನ್ನೇ ಮುಂದಾಗಿಸಿಕೊಂಡು ಜನರತ್ತ ತೆರಳುವಂತೆ ಸೂಚಿಸಿದರು.