ಪ್ರಕರಣ ದಾಖಲು: ಉಕ್ಕಿನಡ್ಕದಿಂದ ಅಡ್ಕಸ್ಥಳದ ತನಕದ ರಸ್ತೆ ತಡೆ ಮಾಡಿದ ಸುಮಾರು 80 ಮಂದಿ ವಿರುದ್ಧ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೆರ್ಲದಲ್ಲಿ ಪ್ರತಿಭಟನೆಗೆ ನೇತೃತ್ವ ನೀಡಿದ ಎಣ್ಮಕಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪವಾಣಿ ಆರ್ ಭಟ್, ಮಾಜಿ ಅಧ್ಯಕ್ಷ ಸೋಮಶೇಖರ ಜೆ.ಎಸ್, ಮುಖಂಡರಾದ ವಿನೋದ್ ಕಾಟುಕುಕ್ಕೆ, ಸಾದಿಕ್, ನಾರಾಯಣ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.