‘ನಗರದ ಸಾರ್ವಜನಿಕ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 106 ಹಳ್ಳಿಗಳ ಜನ ಭಾಗವಹಿಸಲಿದ್ದಾರೆ. ಎಲ್ಲ ಹಳ್ಳಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿಯ ಏಜೆನ್ಸಿಯೊಂದು ಶಾಮಿಯಾನ, ಪ್ರಚಾರ ಫಲಕಗಳ ಅಳವಡಿಕೆ ಗುತ್ತಿಗೆ ಪಡೆದಿದೆ’ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಅಕ್ಬರ್ ಪಾಷಾ ಮಾಹಿತಿ
ನೀಡಿದರು. ‘ಕುಕನೂರಿನ ಸಮಾವೇಶದಲ್ಲಿ 50 ಸಾವಿರ ಜನ ಭಾಗವಹಿಸಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.