ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ಹಿಂದೆ ಪ್ರಚಾರ ಮಾಡಿದ ಬಹುತೇಕ ಕಡೆ ಕಾಂಗ್ರೆಸ್ಗೆ ಹಿನ್ನಡೆಯಾಗಿ ಬಿಜೆಪಿ ಜಯ ಗಳಿಸಿದೆ. ಹೀಗಾಗಿ ಅವರು ಬಳ್ಳಾರಿಗೆ ಬರುವುದರಿಂದ ಬಿಜೆಪಿಗೆ ಭಾಗ್ಯವೇ ಬಂದಂತಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
‘ಚುನಾವಣಾ ಪ್ರಚಾರಕ್ಕೆ ಬಳ್ಳಾರಿ ಜಿಲ್ಲೆಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆತ್ಮೀಯ ಸ್ವಾಗತ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಬಳ್ಳಾರಿ ಜಿಲ್ಲೆಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆತ್ಮೀಯ ಸ್ವಾಗತ. ಅವರು ಈ ಹಿಂದೆ ಪ್ರಚಾರ ಮಾಡಿದ ಬಹುತೇಕ ಕಡೆ ಕಾಂಗ್ರೆಸ್ಗೆ ಹಿನ್ನಡೆಯಾಗಿ ಬಿಜೆಪಿ ಜಯಗಳಿಸಿದೆ.
ರಾಹುಲ್ ಬರುವುದು ಬಿಜೆಪಿಗೆ ಭಾಗ್ಯವೇ ಬಂದಂತಾಗಿದೆ.#ParivartanaYatre#RahulGandhipic.twitter.com/AiyblVCmvK