ತನ್ವಿ ರಾವ್ ಈ ಚಿತ್ರದ ಮೂಲಕ ನಾಯಕಿಯಾಗಿ ಪರಿಚಿತರಾಗುತ್ತಿದ್ದಾರೆ. ಗೋವಾ, ಮಂಗಳೂರು, ಬೆಂಗಳೂರು ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಜಯಂತ ಕಾಯ್ಕಿಣಿ, ಮಾರುತಿ ಟಿ. ಜತೆಗೆ ಮಲ್ಲಿಕಾರ್ಜುನ್ ಕೂಡ ಹಾಡುಗಳಿಗೆ ಪದ ಪೋಣಿಸಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿದ್ದಾರೆ. ನಂದಕಿಶೋರ್ ಛಾಯಾಗ್ರಹಣ ಚಿತ್ರಕ್ಕಿದೆ.