<p><strong>ಬೆಂಗಳೂರು:</strong> ‘ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ಗೆ (ನರೇಗಾ) ಕೇಂದ್ರದಿಂದ ₹ 1,227 ಕೋಟಿ ಬಾಕಿ ಬಿಡುಗಡೆ ಆಗಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ವಿಧಾನಪರಿಷತ್ತಿನಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಬಸನಗೌಡ ಪಾಟೀಲ ಯತ್ನಾಳ್ ಪ್ರಶ್ನೆಗೆ ಉತ್ತರಿಸಿ, ಅನುದಾನ ಬಿಡುಗಡೆಗೆ ಕೋರಿ ಪ್ರಸ್ತಾವನೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದರು.</p>.<p>2017 ರಲ್ಲಿ ರಾಜ್ಯದಲ್ಲಿ ಬರಗಾಲವಿತ್ತು. ಹಣ ಪಾವತಿ ತೊಂದರೆ ಆಗಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರವೇ 2015–16 ರಲ್ಲಿ ₹ 750 ಕೋಟಿ, 2016–17 ಸಾಲಿನಲ್ಲಿ ₹ 1,425 ಕೋಟಿ ಮುಂಗಡವಾಗಿ ಬಿಡುಗಡೆ ಮಾಡಿತ್ತು. ಈ ಹಣ ಕೇಂದ್ರದಿಂದ ಮರು ಪಾವತಿ ಆಗಿಲ್ಲ ಎಂದು ದೇಶಪಾಂಡೆ ಅವರು ತಿಳಿಸಿದರು.</p>.<p>2015–16 ರಲ್ಲಿ ಕೇಂದ್ರ ಸರ್ಕಾರ ₹ 996.78 ಕೋಟಿ, ರಾಜ್ಯ ಸರ್ಕಾರ ₹ 781.64 ಕೋಟಿ, 2016–17 ರಲ್ಲಿ ಕೇಂದ್ರ ಸರ್ಕಾರ ₹ 2,140.08 ಕೋಟಿ ಮತ್ತು ರಾಜ್ಯ ಸರ್ಕಾರ ₹ 1,086.98 ಕೋಟಿ ಬಿಡುಗಡೆ ಮಾಡಲಾಗಿತ್ತು. ನರೇಗಾ ಯೋಜನೆಯಡಿ ಕೂಲಿ ಮತ್ತು ಸಾಮಗ್ರಿ ವೆಚ್ಚಗಳನ್ನು 60:40 ಅನುಪಾತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತವೆ ಎಂದರು.</p>.<p><strong>2,435 ಅವ್ಯವಹಾರ ಪ್ರಕರಣ:</strong> ಕಳೆದ ನಾಲ್ಕು ವರ್ಷಗಳಲ್ಲಿ 28 ಜಿಲ್ಲೆಗಳಲ್ಲಿ ನರೇಗಾ ಯೋಜನೆಯಡಿ 2,435 ಅವ್ಯವಹಾರ ಪ್ರಕರಣಗಳು ದಾಖಲಾಗಿವೆ ಎಂದು ದೇಶಪಾಂಡೆ ತಿಳಿಸಿದರು.</p>.<p>ಈ ಪ್ರಕರಣಗಳ ಕುರಿತು ಓಂಬುಡ್ಸ್ಮನ್, ಸಾಮಾಜಿಕ ಪರಿಶೋಧನೆ, ಗುಣ ನಿಯಂತ್ರಣ ಉಸ್ತುವಾರಿ, ಇಲಾಖಾ ಅಧಿಕಾರಿಗಳ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಇವುಗಳ ಪೈಕಿ 660 ಪ್ರಕರಣಗಳು ಸಾಬೀತಾಗಿವೆ. ಈವರೆಗೆ ₹ 186.31 ಲಕ್ಷ ವಸೂಲಿಯಾಗಿದ್ದು, 408 ಪ್ರಕರಣಗಳಲ್ಲಿ ವಸೂಲಿ ಬಾಕಿ ಇದೆ ಎಂದು ಹೇಳಿದರು.</p>.<p>ಇವುಗಳಲ್ಲಿ 32 ಪ್ರಕರಣಗಳಲ್ಲಿ ಕಾಮಗಾರಿ ನಡೆಸದೇ ಹಣ ಮಂಜೂರಾತಿ ಮಾಡಲಾಗಿದೆ. 164 ಪ್ರಕರಣಗಳಲ್ಲಿ ಕಾಮಗಾರಿ ಮೊತ್ತಕ್ಕಿಂತ ಹೆಚ್ಚು ಹಣ ಬಳಕೆಯಾಗಿದೆ ಎಂದು ಅವರು ಹೇಳಿದರು.</p>.<p><strong>₹2 ಕೋಟಿ ಅಕ್ರಮ: ಕ್ರಮಕ್ಕೆ ಆದೇಶ</strong></p>.<p>ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿದೆ ಎನ್ನಲಾದ ₹2 ಕೋಟಿ ಅಕ್ರಮಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.</p>.<p>2016–17ರಲ್ಲಿ ಕ್ರಿಯಾ ಯೋಜನೆಯಲ್ಲಿ ಸೇರಿರದ 130 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ₹1.80 ಕೋಟಿ ಮೊತ್ತವನ್ನು ಬ್ಯಾಂಕಿನಿಂದ ಪಡೆದು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ. ಅಕ್ರಮ ನಡೆಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಹಾಗಿದ್ದರೂ ಕ್ರಮ ಜರುಗಿಸಿಲ್ಲ ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಟೀಕಿಸಿದರು.</p>.<p>‘ಕ್ರಿಯಾ ಯೋಜನೆ ಬಿಟ್ಟು ಕಾಮಗಾರಿ ನಡೆಸಿರುವುದು ಗಂಭೀರ ಪ್ರಕರಣ. ಪಂಚಾಯಿತಿಯ ಅಸಹಾಯಕತನದಿಂದಾಗಿ ಇದು ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ. ನಿಮಗೆ ಅನುಮಾನ ಬೇಡ’ ಎಂದು ಕಾಗೋಡು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ಗೆ (ನರೇಗಾ) ಕೇಂದ್ರದಿಂದ ₹ 1,227 ಕೋಟಿ ಬಾಕಿ ಬಿಡುಗಡೆ ಆಗಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ವಿಧಾನಪರಿಷತ್ತಿನಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಬಸನಗೌಡ ಪಾಟೀಲ ಯತ್ನಾಳ್ ಪ್ರಶ್ನೆಗೆ ಉತ್ತರಿಸಿ, ಅನುದಾನ ಬಿಡುಗಡೆಗೆ ಕೋರಿ ಪ್ರಸ್ತಾವನೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದರು.</p>.<p>2017 ರಲ್ಲಿ ರಾಜ್ಯದಲ್ಲಿ ಬರಗಾಲವಿತ್ತು. ಹಣ ಪಾವತಿ ತೊಂದರೆ ಆಗಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರವೇ 2015–16 ರಲ್ಲಿ ₹ 750 ಕೋಟಿ, 2016–17 ಸಾಲಿನಲ್ಲಿ ₹ 1,425 ಕೋಟಿ ಮುಂಗಡವಾಗಿ ಬಿಡುಗಡೆ ಮಾಡಿತ್ತು. ಈ ಹಣ ಕೇಂದ್ರದಿಂದ ಮರು ಪಾವತಿ ಆಗಿಲ್ಲ ಎಂದು ದೇಶಪಾಂಡೆ ಅವರು ತಿಳಿಸಿದರು.</p>.<p>2015–16 ರಲ್ಲಿ ಕೇಂದ್ರ ಸರ್ಕಾರ ₹ 996.78 ಕೋಟಿ, ರಾಜ್ಯ ಸರ್ಕಾರ ₹ 781.64 ಕೋಟಿ, 2016–17 ರಲ್ಲಿ ಕೇಂದ್ರ ಸರ್ಕಾರ ₹ 2,140.08 ಕೋಟಿ ಮತ್ತು ರಾಜ್ಯ ಸರ್ಕಾರ ₹ 1,086.98 ಕೋಟಿ ಬಿಡುಗಡೆ ಮಾಡಲಾಗಿತ್ತು. ನರೇಗಾ ಯೋಜನೆಯಡಿ ಕೂಲಿ ಮತ್ತು ಸಾಮಗ್ರಿ ವೆಚ್ಚಗಳನ್ನು 60:40 ಅನುಪಾತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತವೆ ಎಂದರು.</p>.<p><strong>2,435 ಅವ್ಯವಹಾರ ಪ್ರಕರಣ:</strong> ಕಳೆದ ನಾಲ್ಕು ವರ್ಷಗಳಲ್ಲಿ 28 ಜಿಲ್ಲೆಗಳಲ್ಲಿ ನರೇಗಾ ಯೋಜನೆಯಡಿ 2,435 ಅವ್ಯವಹಾರ ಪ್ರಕರಣಗಳು ದಾಖಲಾಗಿವೆ ಎಂದು ದೇಶಪಾಂಡೆ ತಿಳಿಸಿದರು.</p>.<p>ಈ ಪ್ರಕರಣಗಳ ಕುರಿತು ಓಂಬುಡ್ಸ್ಮನ್, ಸಾಮಾಜಿಕ ಪರಿಶೋಧನೆ, ಗುಣ ನಿಯಂತ್ರಣ ಉಸ್ತುವಾರಿ, ಇಲಾಖಾ ಅಧಿಕಾರಿಗಳ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಇವುಗಳ ಪೈಕಿ 660 ಪ್ರಕರಣಗಳು ಸಾಬೀತಾಗಿವೆ. ಈವರೆಗೆ ₹ 186.31 ಲಕ್ಷ ವಸೂಲಿಯಾಗಿದ್ದು, 408 ಪ್ರಕರಣಗಳಲ್ಲಿ ವಸೂಲಿ ಬಾಕಿ ಇದೆ ಎಂದು ಹೇಳಿದರು.</p>.<p>ಇವುಗಳಲ್ಲಿ 32 ಪ್ರಕರಣಗಳಲ್ಲಿ ಕಾಮಗಾರಿ ನಡೆಸದೇ ಹಣ ಮಂಜೂರಾತಿ ಮಾಡಲಾಗಿದೆ. 164 ಪ್ರಕರಣಗಳಲ್ಲಿ ಕಾಮಗಾರಿ ಮೊತ್ತಕ್ಕಿಂತ ಹೆಚ್ಚು ಹಣ ಬಳಕೆಯಾಗಿದೆ ಎಂದು ಅವರು ಹೇಳಿದರು.</p>.<p><strong>₹2 ಕೋಟಿ ಅಕ್ರಮ: ಕ್ರಮಕ್ಕೆ ಆದೇಶ</strong></p>.<p>ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿದೆ ಎನ್ನಲಾದ ₹2 ಕೋಟಿ ಅಕ್ರಮಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.</p>.<p>2016–17ರಲ್ಲಿ ಕ್ರಿಯಾ ಯೋಜನೆಯಲ್ಲಿ ಸೇರಿರದ 130 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ₹1.80 ಕೋಟಿ ಮೊತ್ತವನ್ನು ಬ್ಯಾಂಕಿನಿಂದ ಪಡೆದು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ. ಅಕ್ರಮ ನಡೆಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಹಾಗಿದ್ದರೂ ಕ್ರಮ ಜರುಗಿಸಿಲ್ಲ ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಟೀಕಿಸಿದರು.</p>.<p>‘ಕ್ರಿಯಾ ಯೋಜನೆ ಬಿಟ್ಟು ಕಾಮಗಾರಿ ನಡೆಸಿರುವುದು ಗಂಭೀರ ಪ್ರಕರಣ. ಪಂಚಾಯಿತಿಯ ಅಸಹಾಯಕತನದಿಂದಾಗಿ ಇದು ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ. ನಿಮಗೆ ಅನುಮಾನ ಬೇಡ’ ಎಂದು ಕಾಗೋಡು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>