‘ಕೋಮು ಪೂರ್ವಗ್ರಹಗಳು ಇಲ್ಲದಿರುವವರೂ ಇದ್ದಾರೆ ಎಂಬುದನ್ನು ಒಪ್ಪಿಕೊಳ್ಳಲು ಹಲವರಿಗೆ ಸಾಧ್ಯವೇ ಆಗುವುದಿಲ್ಲ. ಏಕೆಂದರೆ ಅವರಲ್ಲಿಯೇ ಕೋಮು ಪೂರ್ವಗ್ರಹಗಳು ಇರುತ್ತವೆ. ಕಾಶ್ಮೀರಿ ಪಂಡಿತರ ಸಮಸ್ಯೆಗಳ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ದಿವಂಗತ ಮುಫ್ತಿ ಮೊಹಮ್ಮದ್ ಸಯೀದ್ ಮತ್ತು ಈಗಿನ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಜತೆ ಎಷ್ಟು ಬಾರಿ ಚರ್ಚಿಸಿದ್ದೇನೆ ಎಂಬುದನ್ನು ಅಶೋಕ್ ಪಂಡಿತ್ ಅವರನ್ನು ಕೇಳಿ ತಿಳಿದುಕೊಳ್ಳಿ’ ಎಂದು ಅವರು ಮತ್ತೊಂದು ಟ್ವೀಟ್ನಲ್ಲಿ ಹೇಳಿದ್ದಾರೆ.