ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಫಲಾನುಭವಿಗಳು ಭರಿಸಬೇಕಾದ ಹಣವನ್ನು ಆಯಾ ಏಜೆನ್ಸಿಗಳಿಗೆ ರಾಜ್ಯ ಸರ್ಕಾರವೇ ಡಿಡಿ ಮೂಲಕ ಪಾವತಿಸುತ್ತಿದೆ. ಕೇಂದ್ರ ಸರ್ಕಾರ ಎಲ್ಲ ಮೊತ್ತವನ್ನು ನೇರವಾಗಿ ಪೆಟ್ರೋಲಿಯಂ ಕಂಪನಿಗಳಿಗೆ ಪಾವತಿಸುವಂತೆ ಷರತ್ತು ವಿಧಿಸಿದೆ. ಆದರೆ, ಕಂಪನಿಗಳು ಹಣ ಪಡೆದು ವಿಳಂಬ ಮಾಡಿದರೆ, ನಾವು ಯಾರನ್ನು ಪ್ರಶ್ನಿಸಬೇಕು’ ಎಂದು ಕೇಳಿದರು.