ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಥು ಲಾ ಮೂಲಕ ಮಾನಸ ಸರೋವರ ಯಾತ್ರೆಗೆ ಅವಕಾಶ

Last Updated 9 ಫೆಬ್ರುವರಿ 2018, 20:02 IST
ಅಕ್ಷರ ಗಾತ್ರ

ನವದೆಹಲಿ : ನಾಥು ಲಾ ಮಾರ್ಗದ ಮೂಲಕ ಕೈಲಾಸ ಮಾನಸ ಸರೋವರ ಯಾತ್ರೆಗೆ ಚೀನಾ ಅವಕಾಶ ನೀಡಿದೆ.

‘ಕಳೆದ ಡಿಸೆಂಬರ್‌ನಲ್ಲಿ ಉಭಯ ರಾಷ್ಟ್ರಗಳ ವಿದೇಶಾಂಗ ಸಚಿವರು ಈ ಬಗ್ಗೆ ಚರ್ಚಿಸಿದ್ದರು. ಈಗ ತನ್ನ ನಿರ್ಧಾರದ ಬಗ್ಗೆ ಚೀನಾ ದೃಢಪಡಿಸಿದೆ’ ಎಂದು ವಿದೇಶಾಂಗ ವ್ಯವಹಾರಗಳ  ಖಾತೆ ರಾಜ್ಯ ಸಚಿವ ವಿ. ಕೆ. ಸಿಂಗ್‌ ಅವರು ಶುಕ್ರವಾರ ಲೋಕಸಭೆಗೆ ತಿಳಿಸಿದ್ದಾರೆ.

ಭಾರತ ಹಾಗೂ ಚೀನಾ ಸೇನೆಗಳ ನಡುವೆ ದೋಕಲಾದಲ್ಲಿ ಉಂಟಾದ ಸಂಘರ್ಷದಿಂದಾಗಿ ಕಳೆದ ವರ್ಷ ಈ ಮಾರ್ಗದ ಮೂಲಕ ಯಾತ್ರೆಯನ್ನು ಚೀನಾ ಸ್ಥಗಿತಗೊಳಿಸಿತ್ತು. ನಾಲ್ಕು ತಿಂಗಳ ಈ ಯಾತ್ರೆಯು ಜೂನ್‌ನಿಂದ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT