ರಾಹುಲ್ ಗಾಂಧಿ ಎ.ಐ.ಸಿ.ಸಿ. ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ರಾಜ್ಯದ ಗಣಿ ನಾಡಿಗೆ ಬರುತ್ತಿದ್ದಾರೆ. ಅವರಿಗೆ ಸ್ವಾಗತ ಕೋರಲು ಶುಕ್ರವಾರ ಅಂತಿಮ ಸಿದ್ಧತೆ ಮಾಡಿಕೊಳ್ಳಲಾಯಿತು. ಇಲ್ಲಿನ ಕಾಲೇಜು ರಸ್ತೆ ಸಂಪೂರ್ಣ ಕಾಂಗ್ರೆಸ್ಮಯವಾಗಿದೆ. ಎಲ್ಲೆಡೆ ಕಾಂಗ್ರೆಸ್ ಧ್ವಜಗಳು, ಹಸ್ತದ ಚಿಹ್ನೆ ಹೊಂದಿರುವ ತೋರಣಗಳು, ಫ್ಲೆಕ್ಸ್ಗಳು ರಾರಾಜಿಸುತ್ತಿವೆ.