‘ಶಾಲೆಯಲ್ಲಿ ಇತರ ಶಿಕ್ಷಕರೊಂದಿಗೆ ನವ್ಯಶ್ರೀ ಮಾತನಾಡುತ್ತಿದ್ದರು. ಈ ವೇಳೆ ದೇಗುಲದಿಂದ ತಂದಿದ್ದ ಪ್ರಸಾದದ ತೆಂಗಿನಕಾಯಿ ತಿಂದರು. ಗಂಟಲಿನಲ್ಲಿ ತೆಂಗಿನಕಾಯಿ ಚೂರು ಸಿಲುಕಿಕೊಂಡು ಉಸಿರಾಟದ ಸಮಸ್ಯೆಯಾಗಿ ಅಸ್ವಸ್ಥರಾಗಿ ಕೆಳಕ್ಕೆ ಬಿದ್ದರು. ತಕ್ಷಣವೇ ಅವರನ್ನು ಹೋಲಿಕ್ರಾಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ನವ್ಯಶ್ರೀ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದರು’ ಎಂದು ಅವರ ಸಂಬಂಧಿ ಕುಮಾರ್ ತಿಳಿಸಿದರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.