ಜಿಲ್ಲೆಯಲ್ಲಿ ಅರಣ್ಯ ನಾಶವಾಗುತ್ತಿದೆ ಎಂಬ ಉಪ ಲೋಕಾಯುಕ್ತರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಕಾಗೋಡು, ‘ಮಲೆನಾಡಿಗರು ಶತಮಾನಗಳಿಂದ ಅರಣ್ಯದಲ್ಲಿ ಬದುಕಿದ್ದಾರೆ. ಬೇರೆಯವರಿಂದ ಇಲ್ಲಿನ ಜನ ಸಂಸ್ಕೃತಿಯ ಪಾಠ ಕಲಿಯಬೇಕಾಗಿಲ್ಲ. ಅವರಿಗೆ ಮಲೆನಾಡಿನ ಮೇಲೆ ಪ್ರೀತಿ ಇದ್ದರೆ ಇಲ್ಲೇ ಬಂದು ನೆಲೆಸಲಿ’ ಎಂದು ಸಲಹೆ ನೀಡಿದರು.