ಹೊಸಪೇಟೆ: 'ರಾಹುಲ್ ಗಾಂಧಿಯವರ ಮುಂದೆ ಬಿಜೆಪಿ ಮುಖಂಡರನ್ನು ಕರೆದು ಬರಮಾಡಿಕೊಂಡಿರುವುದು ನೋಡಿದರೆ ಕಾಂಗ್ರೆಸ್ ಯಾವ ಮಟ್ಟಕ್ಕೆ ಇಳಿದಿದೆ ಎನ್ನುವುದು ಗೊತ್ತಾಗುತ್ತದೆ' ಎಂದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಮಾಜಿಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದರು.
ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ಅನೇಕ ವರ್ಷಗಳಿಂದ ಕಾಂಗ್ರೆಸ್ಗೆ ದುಡಿಯುತ್ತಿದ್ದೇವೆ. ನಮ್ಮನ್ನು ಕಡೆಗಣಿಸಿ ಬಿಜೆಪಿ ಶಾಸಕರನ್ನು ಪಕ್ಷಕ್ಕೆ ಕರೆದುಕೊಂಡು ಅನೇಕ ಜನರಿಗೆ ಅನ್ಯಾಯ ಮಾಡಿದ್ದಾರೆ’ ಎಂದು ಹೇಳಿದರು.
‘ಇತ್ತೀಚೆಗೆ ಕಾಂಗ್ರೆಸ್ ಸೇರಿದ ಆನಂದ್ ಸಿಂಗ್ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ. ಅವರನ್ನು ಬರಮಾಡಿಕೊಂಡ ಕಾಂಗ್ರೆಸ್ ವರಿಷ್ಠರ ಬಗ್ಗೆ ಅಸಮಾಧಾನವಿದೆ’ ಎಂದು ಹೇಳಿದರು.