‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಹೆಸರನ್ನು ನೋಡಿ ನೋಂದಣಿ ಪಡೆದೆವು. ವಿ.ವಿ.ಯಲ್ಲಿ ಆಗುತ್ತಿದ್ದ ಅವ್ಯವಹಾರಗಳು ನಮಗೇನು ಗೊತ್ತು? ಮುಗ್ಧರಾದ ನಮ್ಮ ಮೇಲೇಕೆ ಗದಾಪ್ರಹಾರ ನಡೆಸಬೇಕು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಕೊಡಲಿ’ ಎಂದು ವಿದ್ಯಾರ್ಥಿ ಮುಖಂಡ ಪ್ರಶಾಂತ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. ‘ಇದೇ ಕಾರಣಕ್ಕೆ ನಾವು ಹಳದಿ ಬಣ್ಣದ ಅರ್ಜಿ ತಯಾರಿಸಿದ್ದೇವೆ. ಅದರಲ್ಲಿ ವಿದ್ಯಾರ್ಥಿಯ ಹೆಸರು, ನೋಂದಣಿ ಸಂಖ್ಯೆ, ನೋಂದಣಿ ವರ್ಷದ ಮಾಹಿತಿಯನ್ನು ತುಂಬಬೇಕು.