<p><strong>ಹುಬ್ಬಳ್ಳಿ: </strong>ಬಾಗಲಕೋಟೆ, ವಿಜಯಪುರ, ಬಳ್ಳಾರಿ ಹಾಗೂ ಗದಗ ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಗುಡುಗು, ಬಿರುಗಾಳಿ, ಆಲಿಕಲ್ಲು ಸಹಿತ ಬಿರುಸಿನ ಮಳೆಯಾಗಿದೆ.</p>.<p>ಗದಗ ಜಿಲ್ಲೆ ಡಂಬಳ ಸುತ್ತಮುತ್ತ ಕಟಾವಿಗೆ ಬಂದಿದ್ದ ಜೋಳ ಮತ್ತು ಹತ್ತಿ ಬೆಳೆ, 20ಕ್ಕೂ ಹೆಚ್ಚು ಇಟ್ಟಿಗೆ ಬಟ್ಟಿಗಳು ಹಾನಿಗೀಡಾಗಿವೆ.</p>.<p>ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕು ಮಸಬಿನ ಹಾಳದಲ್ಲಿ ಆಲಿಕಲ್ಲು ಮಳೆಯಾಗಿದ್ದು ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗೆ ಹಾನಿಯಾಗಿದೆ. ಆಲಮಟ್ಟಿ, ನಿಡಗುಂದಿಯಲ್ಲಿ ಮಧ್ಯಾಹ್ನವೇ ಆರಂಭವಾದ ಮಳೆ ಸಂಜೆ ವೇಳೆಗೆ ಬಿರುಸಾಗಿ ಸುರಿದಿದೆ. ಸಮೀಪದ ವಂದಾಲ, ಬೇನಾಳದಲ್ಲಿ ಆಲಿಕಲ್ಲು ಸಹಿತ ಅರ್ಧತಾಸು ಮಳೆಯಾಗಿದೆ.</p>.<p>ಬಾಗಲಕೋಟೆ ಹಾಗೂ ಬೀಳಗಿ<br /> ಯಲ್ಲಿ ಬಿರುಸಿನ ಮಳೆಯಾಗಿದ್ದು, ಬಳ್ಳಾರಿ ಜಿಲ್ಲೆಯ ಹೊಸಪೇಟೆ, ಕೊಟ್ಟೂರಿನಲ್ಲಿ ಸಾಧಾರಣ ಮಳೆ ಅಗಿದೆ. ಗದುಗಿನಲ್ಲಿ ಶನಿವಾರ ತಡರಾತ್ರಿ ಮಳೆ ಸುರಿದಿದೆ.</p>.<p><strong>ಹಲವೆಡೆ ಮಳೆ</strong></p>.<p><strong>ಬೆಂಗಳೂರು:</strong> ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಸೋಮವಾರಪೇಟೆ, ಚಿಕ್ಕಮಗಳೂರು, ನಾಯಕನಹಟ್ಟಿ, ಬುಕ್ಕಪಟ್ಟಣ ಹಾಗೂ ಸಿರಾದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.</p>.<p>ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಎಂದಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಎಂದಿನಂತೆ ಮುಂದುವರಿದಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.</p>.<p>ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಬಾಗಲಕೋಟೆ, ವಿಜಯಪುರ, ಬಳ್ಳಾರಿ ಹಾಗೂ ಗದಗ ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಗುಡುಗು, ಬಿರುಗಾಳಿ, ಆಲಿಕಲ್ಲು ಸಹಿತ ಬಿರುಸಿನ ಮಳೆಯಾಗಿದೆ.</p>.<p>ಗದಗ ಜಿಲ್ಲೆ ಡಂಬಳ ಸುತ್ತಮುತ್ತ ಕಟಾವಿಗೆ ಬಂದಿದ್ದ ಜೋಳ ಮತ್ತು ಹತ್ತಿ ಬೆಳೆ, 20ಕ್ಕೂ ಹೆಚ್ಚು ಇಟ್ಟಿಗೆ ಬಟ್ಟಿಗಳು ಹಾನಿಗೀಡಾಗಿವೆ.</p>.<p>ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕು ಮಸಬಿನ ಹಾಳದಲ್ಲಿ ಆಲಿಕಲ್ಲು ಮಳೆಯಾಗಿದ್ದು ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗೆ ಹಾನಿಯಾಗಿದೆ. ಆಲಮಟ್ಟಿ, ನಿಡಗುಂದಿಯಲ್ಲಿ ಮಧ್ಯಾಹ್ನವೇ ಆರಂಭವಾದ ಮಳೆ ಸಂಜೆ ವೇಳೆಗೆ ಬಿರುಸಾಗಿ ಸುರಿದಿದೆ. ಸಮೀಪದ ವಂದಾಲ, ಬೇನಾಳದಲ್ಲಿ ಆಲಿಕಲ್ಲು ಸಹಿತ ಅರ್ಧತಾಸು ಮಳೆಯಾಗಿದೆ.</p>.<p>ಬಾಗಲಕೋಟೆ ಹಾಗೂ ಬೀಳಗಿ<br /> ಯಲ್ಲಿ ಬಿರುಸಿನ ಮಳೆಯಾಗಿದ್ದು, ಬಳ್ಳಾರಿ ಜಿಲ್ಲೆಯ ಹೊಸಪೇಟೆ, ಕೊಟ್ಟೂರಿನಲ್ಲಿ ಸಾಧಾರಣ ಮಳೆ ಅಗಿದೆ. ಗದುಗಿನಲ್ಲಿ ಶನಿವಾರ ತಡರಾತ್ರಿ ಮಳೆ ಸುರಿದಿದೆ.</p>.<p><strong>ಹಲವೆಡೆ ಮಳೆ</strong></p>.<p><strong>ಬೆಂಗಳೂರು:</strong> ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಸೋಮವಾರಪೇಟೆ, ಚಿಕ್ಕಮಗಳೂರು, ನಾಯಕನಹಟ್ಟಿ, ಬುಕ್ಕಪಟ್ಟಣ ಹಾಗೂ ಸಿರಾದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.</p>.<p>ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಎಂದಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಎಂದಿನಂತೆ ಮುಂದುವರಿದಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.</p>.<p>ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>