<p><strong>ಬೆಂಗಳೂರು:</strong> ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಜನಜಾಗೃತಿ ಮೂಡಿಸಲು ‘ಸಂವಿಧಾನ ರಕ್ಷಣೆಗಾಗಿ ಕರ್ನಾಟಕ’ ಎಂಬ ಹೊಸ ಒಕ್ಕೂಟವನ್ನು ಪ್ರಗತಿಪರ ಸಂಘಟನೆಗಳು ಸ್ಥಾಪಿಸಿವೆ.</p>.<p>ಶಾಸಕರ ಭವನದಲ್ಲಿ ಭಾನುವಾರ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಒಕ್ಕೂಟ ರಚಿಸಲು ನಿರ್ಧರಿಸಲಾಯಿತು ಎಂದು ಕೋಮು ಸೌಹಾರ್ದ ವೇದಿಕೆ ಸಂಚಾಲಕ ಕೆ.ಎಲ್. ಅಶೋಕ್ ತಿಳಿಸಿದರು.</p>.<p>ಮತಾಂಧರು ಮತ್ತು ಸಂವಿಧಾನ ವಿರೋಧಿಗಳನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವುದು ಒಕ್ಕೂಟದ ಉದ್ದೇಶ. ಮಾರ್ಗದರ್ಶಕ ಮಂಡಳಿ ರಚನೆ ಮತ್ತು ಅಭಿಯಾನದ ರೂಪುರೇಷೆ ಸಿದ್ಧಪಡಿಸಲು ಇದೇ 17ರಂದು ಮತ್ತೆ ಸಭೆ ನಡೆಯಲಿದೆ ಎಂದು ಅವರು ಹೇಳಿದರು.</p>.<p>‘ಜಾತ್ಯತೀತ ಸಿದ್ಧಾಂತದ ಪಕ್ಷಗಳ ನಿರ್ಲಕ್ಷ್ಯದಿಂದ ಕೋಮುವಾದಿ ಶಕ್ತಿಗಳು ದೇಶದಲ್ಲಿ ನೆಲೆಯೂರಿದೆ. ಪರಿಣಾಮವಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಇಕ್ಕಟ್ಟಿಗೆ ಸಿಲುಕಿದೆ. ಈ ತಪ್ಪುಗಳನ್ನು ಅವರಿಗೆ ಮನವರಿಕೆ ಮಾಡಿಸುವುದು ಮತ್ತು ಒಟ್ಟಾಗಿ ಹೋರಾಡುವುದು ಇಂದಿನ ಅಗತ್ಯ’ ಎಂದು ಜನಸಂಗ್ರಾಮ ಪರಿಷತ್ ಗೌರವ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಅಭಿಪ್ರಾಯಪಟ್ಟರು.</p>.<p>ಜನಾಂದೋಲನ ಮಹಾಮೈತ್ರಿ, ಸ್ವರಾಜ್ ಅಭಿಯಾನ, ಜನಶಕ್ತಿ, ದಲಿತ ಸಂಘರ್ಷ ಸಮಿತಿ, ರೈತ ಸಂಘ, ಜಮಾತೆ– ಇಸ್ಲಾಮಿ ಹಿಂದ್, ಮಹಿಳಾ ಮುನ್ನಡೆ, ದಲಿತ ಹೋರಾಟ ಸಮಿತಿ, ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿ ಮತ್ತಿತರ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಜನಜಾಗೃತಿ ಮೂಡಿಸಲು ‘ಸಂವಿಧಾನ ರಕ್ಷಣೆಗಾಗಿ ಕರ್ನಾಟಕ’ ಎಂಬ ಹೊಸ ಒಕ್ಕೂಟವನ್ನು ಪ್ರಗತಿಪರ ಸಂಘಟನೆಗಳು ಸ್ಥಾಪಿಸಿವೆ.</p>.<p>ಶಾಸಕರ ಭವನದಲ್ಲಿ ಭಾನುವಾರ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಒಕ್ಕೂಟ ರಚಿಸಲು ನಿರ್ಧರಿಸಲಾಯಿತು ಎಂದು ಕೋಮು ಸೌಹಾರ್ದ ವೇದಿಕೆ ಸಂಚಾಲಕ ಕೆ.ಎಲ್. ಅಶೋಕ್ ತಿಳಿಸಿದರು.</p>.<p>ಮತಾಂಧರು ಮತ್ತು ಸಂವಿಧಾನ ವಿರೋಧಿಗಳನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವುದು ಒಕ್ಕೂಟದ ಉದ್ದೇಶ. ಮಾರ್ಗದರ್ಶಕ ಮಂಡಳಿ ರಚನೆ ಮತ್ತು ಅಭಿಯಾನದ ರೂಪುರೇಷೆ ಸಿದ್ಧಪಡಿಸಲು ಇದೇ 17ರಂದು ಮತ್ತೆ ಸಭೆ ನಡೆಯಲಿದೆ ಎಂದು ಅವರು ಹೇಳಿದರು.</p>.<p>‘ಜಾತ್ಯತೀತ ಸಿದ್ಧಾಂತದ ಪಕ್ಷಗಳ ನಿರ್ಲಕ್ಷ್ಯದಿಂದ ಕೋಮುವಾದಿ ಶಕ್ತಿಗಳು ದೇಶದಲ್ಲಿ ನೆಲೆಯೂರಿದೆ. ಪರಿಣಾಮವಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಇಕ್ಕಟ್ಟಿಗೆ ಸಿಲುಕಿದೆ. ಈ ತಪ್ಪುಗಳನ್ನು ಅವರಿಗೆ ಮನವರಿಕೆ ಮಾಡಿಸುವುದು ಮತ್ತು ಒಟ್ಟಾಗಿ ಹೋರಾಡುವುದು ಇಂದಿನ ಅಗತ್ಯ’ ಎಂದು ಜನಸಂಗ್ರಾಮ ಪರಿಷತ್ ಗೌರವ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಅಭಿಪ್ರಾಯಪಟ್ಟರು.</p>.<p>ಜನಾಂದೋಲನ ಮಹಾಮೈತ್ರಿ, ಸ್ವರಾಜ್ ಅಭಿಯಾನ, ಜನಶಕ್ತಿ, ದಲಿತ ಸಂಘರ್ಷ ಸಮಿತಿ, ರೈತ ಸಂಘ, ಜಮಾತೆ– ಇಸ್ಲಾಮಿ ಹಿಂದ್, ಮಹಿಳಾ ಮುನ್ನಡೆ, ದಲಿತ ಹೋರಾಟ ಸಮಿತಿ, ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿ ಮತ್ತಿತರ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>