<p><strong>ರಾಯಚೂರು: </strong>ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರದಿಂದ ಶಿಫಾರಸು ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭರವಸೆ ನೀಡಿದರು ಎಂದು ವಿವಿಧ ದಲಿತ ಸಂಘಟನೆಗಳ ಮುಖಂಡರು ತಿಳಿಸಿದರು.</p>.<p>ಜಿಲ್ಲೆಯ ಸಿಂಧನೂರು ನಗರದಲ್ಲಿ ಭಾನುವಾರ ನಡೆದ ಕಪ್ಪು ಬಾವುಟ ಪ್ರದರ್ಶನ ಹಿನ್ನೆಲೆಯಲ್ಲಿ, ದಲಿತ ಮುಖಂಡರನ್ನು ಸರ್ಕಿಟ್ ಹೌಸ್ಗೆ ಆಹ್ವಾನಿಸಿ ಸೋಮವಾರ ಬೆಳಿಗ್ಗೆ ರಾಹುಲ್ ಗಾಂಧಿ ಅವರು ಮಾತುಕತೆ ನಡೆಸಿದರು.</p>.<p>ರಾಹುಲ್ ಗಾಂಧಿ ಅವರು ಪ್ರತ್ಯೇಕವಾಗಿ ದಲಿತ ಮುಖಂಡರೊಂದಿಗೆ 10 ನಿಮಿಷ ಮಾತನಾಡಿದರು. ಈ ಭಾರಿ ವಿಧಾನಸಭೆ ಚುನಾವಣೆಯಲ್ಲಿ ಅಸ್ಪೃಶ್ಯ ಜಾತಿಗಳ ಮುಖಂಡರಿಗೆ ಆದ್ಯತೆ ಮೇರೆಗೆ ಟಿಕೆಟ್ ನೀಡುತ್ತೇವೆ ಎನ್ನುವ ಭರವಸೆ ಕೂಡಾ ನೀಡಿದ್ದಾರೆ ಎಂದರು.</p>.<p>ದಲಿತ ಮುಖಂಡರಾದ ಅಂಬಣ್ಣ ಅರೋಲಿಕರ, ರವೀಂದ್ರ ಪಟ್ಟಿ ಮತ್ತಿತರರು ಮಾತುಕತೆಗೆ ಹೋಗಿದ್ದರು.</p>.<p><strong>ಇನ್ನಷ್ಟು:</strong> <a href="http://www.prajavani.net/news/article/2018/02/12/553586.html" target="_blank">ರಾಹುಲ್ ಗಾಂಧಿ ಸಾಗುತ್ತಿದ್ದ ಬಸ್ ತಡೆದು ಕಪ್ಪು ಬಾವುಟ ಪ್ರದರ್ಶನ: ವಿಡಿಯೊ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರದಿಂದ ಶಿಫಾರಸು ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭರವಸೆ ನೀಡಿದರು ಎಂದು ವಿವಿಧ ದಲಿತ ಸಂಘಟನೆಗಳ ಮುಖಂಡರು ತಿಳಿಸಿದರು.</p>.<p>ಜಿಲ್ಲೆಯ ಸಿಂಧನೂರು ನಗರದಲ್ಲಿ ಭಾನುವಾರ ನಡೆದ ಕಪ್ಪು ಬಾವುಟ ಪ್ರದರ್ಶನ ಹಿನ್ನೆಲೆಯಲ್ಲಿ, ದಲಿತ ಮುಖಂಡರನ್ನು ಸರ್ಕಿಟ್ ಹೌಸ್ಗೆ ಆಹ್ವಾನಿಸಿ ಸೋಮವಾರ ಬೆಳಿಗ್ಗೆ ರಾಹುಲ್ ಗಾಂಧಿ ಅವರು ಮಾತುಕತೆ ನಡೆಸಿದರು.</p>.<p>ರಾಹುಲ್ ಗಾಂಧಿ ಅವರು ಪ್ರತ್ಯೇಕವಾಗಿ ದಲಿತ ಮುಖಂಡರೊಂದಿಗೆ 10 ನಿಮಿಷ ಮಾತನಾಡಿದರು. ಈ ಭಾರಿ ವಿಧಾನಸಭೆ ಚುನಾವಣೆಯಲ್ಲಿ ಅಸ್ಪೃಶ್ಯ ಜಾತಿಗಳ ಮುಖಂಡರಿಗೆ ಆದ್ಯತೆ ಮೇರೆಗೆ ಟಿಕೆಟ್ ನೀಡುತ್ತೇವೆ ಎನ್ನುವ ಭರವಸೆ ಕೂಡಾ ನೀಡಿದ್ದಾರೆ ಎಂದರು.</p>.<p>ದಲಿತ ಮುಖಂಡರಾದ ಅಂಬಣ್ಣ ಅರೋಲಿಕರ, ರವೀಂದ್ರ ಪಟ್ಟಿ ಮತ್ತಿತರರು ಮಾತುಕತೆಗೆ ಹೋಗಿದ್ದರು.</p>.<p><strong>ಇನ್ನಷ್ಟು:</strong> <a href="http://www.prajavani.net/news/article/2018/02/12/553586.html" target="_blank">ರಾಹುಲ್ ಗಾಂಧಿ ಸಾಗುತ್ತಿದ್ದ ಬಸ್ ತಡೆದು ಕಪ್ಪು ಬಾವುಟ ಪ್ರದರ್ಶನ: ವಿಡಿಯೊ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>