<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ನಂದಿ ಗ್ರಾಮದ ಇತಿಹಾಸ ಪ್ರಸಿದ್ಧ ಭೋಗ ಮತ್ತು ಯೋಗ ನಂದೀಶ್ವರಸ್ವಾಮಿ ಬ್ರಹ್ಮರಥೋತ್ಸವ ಫೆಬ್ರುವರಿ 14 ರಂದು ನಡೆಯಲಿದೆ. ಜಾತ್ರೆಗಾಗಿ ದೇವಾಲಯದ ಆವರಣದಲ್ಲಿ ಸಿದ್ಧತಾ ಕಾರ್ಯಗಳು ಜೋರಾಗಿ ನಡೆದಿದ್ದು, ಎರಡು ಬೃಹತ್ ರಥಗಳನ್ನು ಅಣಿಗೊಳಿಸಲಾಗುತ್ತಿದೆ.</p>.<p>ಮಹಾ ಶಿವರಾತ್ರಿ ದಿನ ಪ್ರತಿ ವರ್ಷದಂತೆ ಈ ಬಾರಿ ಭೋಗ ನಂದೀಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ. ಬ್ರಹ್ಮರಥೋತ್ಸವಕ್ಕೆ ಎರಡು ದಿನ ಬಾಕಿ ಇರುವಾಗಲೇ ಮಹೋತ್ಸವಕ್ಕಾಗಿ ಸಿದ್ಧತೆ ಭರದಿಂದ ನಡೆಯುತ್ತಿದೆ.</p>.<p>ಈಗಾಗಲೇ ರಥ ನಿರ್ಮಾಣದ ಕಾರ್ಯ ಅಂತಿಮ ಹಂತದಲ್ಲಿದ್ದು, ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಜನರ ನೂಕು ನುಗ್ಗುಲು ತಪ್ಪಿಸಲು ಪೊಲೀಸರು ಅಗತ್ಯವಿರುವ ಕಡೆ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದಾರೆ.</p>.<p>ಜಾತ್ರೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಮಾತ್ರವಲ್ಲದೆ ಕೋಲಾರ, ತುಮಕೂರು, ಬೆಂಗಳೂರು ಮತ್ತು ಆಂಧ್ರ ಸೇರಿದಂತೆ ವಿವಿಧಡೆಯಿಂದ ಭಕ್ತರು ಬರಲಿದ್ದಾರೆ. ಈ ವೇಳೆ ಅಹಿತಕರ ಘಟನೆ ನಡೆಯದಂತೆ ಮುಜರಾಯಿ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. 200ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲು ನಿರ್ಧರಿಸಲಾಗಿದ್ದು, ಭಕ್ತರಿಗಾಗಿ ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ದೇವನಹಳ್ಳಿ, ಬೆಂಗಳೂರಿನಿಂದ ನಂದಿ ಹಾಗೂ ನಂದಿಬೆಟ್ಟಕ್ಕೆ –ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.</p>.<p>ದೇಗುಲದ ಸುತ್ತಲು ಪೂಜಾ ಸಾಮಗ್ರಿ, ತಿಂಡಿ ತಿನಿಸು, ಆಟಿಕೆ ವಸ್ತುಗಳು, ಆಲಂಕಾರಿಕ ವಸ್ತುಗಳು, ಹಣ್ಣು, ತಂಪು ಪಾನೀಯ ಸೇರಿದಂತೆ ವಿವಿಧ ಬಗೆಯ ಮಳಿಗೆಗಳು ತಲೆ ಎತ್ತಿವೆ. ಮನರಂಜನಾ ಆಟಗಳ ಯಂತ್ರೋ ಪಕರಣಗಳನ್ನು ಅಳವಡಿಸಲಾಗಿದೆ.</p>.<p>ಎಂದಿನಂತೆ ಜಾತ್ರೆಗೆ ಪೂರ್ವಭಾವಿ ಯಾಗಿ ರಾಸುಗಳ ಸಂತೆ ಆರಂಭವಾಗಿದೆ. ಈ ಬಾರಿ ಬೆರಳಣಿಕೆಯಷ್ಟು ರಾಸುಗಳು ಮಾತ್ರ ಬಂದಿವೆ. ಇನ್ನೂ ಒಂದೆರಡು ದಿನದಲ್ಲಿ ಹೆಚ್ಚಿನ ಸಂಖ್ಯೆಯ ರಾಸುಗಳು ಬರುವ ನಿರೀಕ್ಷೆ ಇರುವುದರಿಂದ ಪೆಂಡಾಲ್, ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ನಂದಿ ಗ್ರಾಮದ ಇತಿಹಾಸ ಪ್ರಸಿದ್ಧ ಭೋಗ ಮತ್ತು ಯೋಗ ನಂದೀಶ್ವರಸ್ವಾಮಿ ಬ್ರಹ್ಮರಥೋತ್ಸವ ಫೆಬ್ರುವರಿ 14 ರಂದು ನಡೆಯಲಿದೆ. ಜಾತ್ರೆಗಾಗಿ ದೇವಾಲಯದ ಆವರಣದಲ್ಲಿ ಸಿದ್ಧತಾ ಕಾರ್ಯಗಳು ಜೋರಾಗಿ ನಡೆದಿದ್ದು, ಎರಡು ಬೃಹತ್ ರಥಗಳನ್ನು ಅಣಿಗೊಳಿಸಲಾಗುತ್ತಿದೆ.</p>.<p>ಮಹಾ ಶಿವರಾತ್ರಿ ದಿನ ಪ್ರತಿ ವರ್ಷದಂತೆ ಈ ಬಾರಿ ಭೋಗ ನಂದೀಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ. ಬ್ರಹ್ಮರಥೋತ್ಸವಕ್ಕೆ ಎರಡು ದಿನ ಬಾಕಿ ಇರುವಾಗಲೇ ಮಹೋತ್ಸವಕ್ಕಾಗಿ ಸಿದ್ಧತೆ ಭರದಿಂದ ನಡೆಯುತ್ತಿದೆ.</p>.<p>ಈಗಾಗಲೇ ರಥ ನಿರ್ಮಾಣದ ಕಾರ್ಯ ಅಂತಿಮ ಹಂತದಲ್ಲಿದ್ದು, ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಜನರ ನೂಕು ನುಗ್ಗುಲು ತಪ್ಪಿಸಲು ಪೊಲೀಸರು ಅಗತ್ಯವಿರುವ ಕಡೆ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದಾರೆ.</p>.<p>ಜಾತ್ರೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಮಾತ್ರವಲ್ಲದೆ ಕೋಲಾರ, ತುಮಕೂರು, ಬೆಂಗಳೂರು ಮತ್ತು ಆಂಧ್ರ ಸೇರಿದಂತೆ ವಿವಿಧಡೆಯಿಂದ ಭಕ್ತರು ಬರಲಿದ್ದಾರೆ. ಈ ವೇಳೆ ಅಹಿತಕರ ಘಟನೆ ನಡೆಯದಂತೆ ಮುಜರಾಯಿ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. 200ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲು ನಿರ್ಧರಿಸಲಾಗಿದ್ದು, ಭಕ್ತರಿಗಾಗಿ ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ದೇವನಹಳ್ಳಿ, ಬೆಂಗಳೂರಿನಿಂದ ನಂದಿ ಹಾಗೂ ನಂದಿಬೆಟ್ಟಕ್ಕೆ –ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.</p>.<p>ದೇಗುಲದ ಸುತ್ತಲು ಪೂಜಾ ಸಾಮಗ್ರಿ, ತಿಂಡಿ ತಿನಿಸು, ಆಟಿಕೆ ವಸ್ತುಗಳು, ಆಲಂಕಾರಿಕ ವಸ್ತುಗಳು, ಹಣ್ಣು, ತಂಪು ಪಾನೀಯ ಸೇರಿದಂತೆ ವಿವಿಧ ಬಗೆಯ ಮಳಿಗೆಗಳು ತಲೆ ಎತ್ತಿವೆ. ಮನರಂಜನಾ ಆಟಗಳ ಯಂತ್ರೋ ಪಕರಣಗಳನ್ನು ಅಳವಡಿಸಲಾಗಿದೆ.</p>.<p>ಎಂದಿನಂತೆ ಜಾತ್ರೆಗೆ ಪೂರ್ವಭಾವಿ ಯಾಗಿ ರಾಸುಗಳ ಸಂತೆ ಆರಂಭವಾಗಿದೆ. ಈ ಬಾರಿ ಬೆರಳಣಿಕೆಯಷ್ಟು ರಾಸುಗಳು ಮಾತ್ರ ಬಂದಿವೆ. ಇನ್ನೂ ಒಂದೆರಡು ದಿನದಲ್ಲಿ ಹೆಚ್ಚಿನ ಸಂಖ್ಯೆಯ ರಾಸುಗಳು ಬರುವ ನಿರೀಕ್ಷೆ ಇರುವುದರಿಂದ ಪೆಂಡಾಲ್, ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>