ನಗರದ ಗಾಂಧಿನಗರದ ಹಿಂದೂ ರುದ್ರಭೂಮಿ ಸಮೀಪದ ಗುಜರಿ ಅಂಗಡಿಯೊಂದರಲ್ಲಿ 10 ದಿನಗಳ ಹಿಂದೆ ವೈದ್ಯಕೀಯ ತ್ಯಾಜ್ಯ ಪತ್ತೆಯಾಗಿ ನಾಗರಿಕರಲ್ಲಿ ಆತಂಕ ಮೂಡಿಸಿತ್ತು. ಈ ತ್ಯಾಜ್ಯ ಯಾವ ಆಸ್ಪತ್ರೆಗಳಿಂದ ಬಂದಿದೆ ಎಂಬುದನ್ನು ಪತ್ತೆ ಹಚ್ಚಲು ಡಿಎಚ್ಒ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚಿಸಿದ್ದರು. ಅದರಂತೆ ಡಿಎಚ್ಒ ತ್ರಿಪುಲಾಂಬಾ, ಜಿಲ್ಲಾ ಆಯುಷ್ ಅಧಿಕಾರಿ ಸಿದ್ದೇಶಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಗಂಗಾಧರಪ್ಪ, ಐಎಂಎ ಅಧ್ಯಕ್ಷ ಡಾ. ನಾಗಪ್ರಕಾಶ್, ಕೆಪಿಎಂಇ ಸತ್ಯನಾರಾಯಣ, ಆರ್ಟಿಐ ಕಾರ್ಯಕರ್ತ ಎಂ.ಜಿ. ಶ್ರೀಕಾಂತ್, ನರ್ಸಿಂಗ್ ಹೋಮ್ ಅಸೋಸಿಯೇಶನ್ ಅಧ್ಯಕ್ಷರು, ಆರೋಗ್ಯ ಅಧಿಕಾರಿಗಳು ಸೇರಿದ ತಂಡ ರಚಿಸಲಾಗಿತ್ತು. ಯಾವ ಆಸ್ಪತ್ರೆಯಲ್ಲಿ ಬಯೊಮೆಡಿಕಲ್ ತ್ಯಾಜ್ಯ ನೀಡುತ್ತಿಲ್ಲ ಎಂಬ ಮಾಹಿತಿಯನ್ನು ವೈದ್ಯಕೀಯ ತ್ಯಾಜ್ಯ ವಿಲೇವಾರಿ ಏಜೆನ್ಸಿ ‘ಸುಶಾಂತ್’ ಸಂಸ್ಥೆಯಿಂದ ಪಡೆದು ಈ ತಂಡವು ದಾಳಿ ನಡೆಸಿದೆ.