<p><strong>ಮುಂಬೈ:</strong> ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ವಂಚನೆ ಪ್ರಕರಣವು ಹೂಡಿಕೆ ಚಟುವಟಿಕೆಯನ್ನು ಗಮನಾರ್ಹವಾಗಿ ತಗ್ಗಿಸಿದೆ. ಇದರಿಂದ ದೇಶದ ಷೇರುಪೇಟೆಗಳಲ್ಲಿ ಇಳಿಮುಖ ವಹಿವಾಟು ನಡೆಯುತ್ತಿದೆ.</p>.<p>ಸೋಮವಾರದ ವಹಿವಾಟಿನಲ್ಲಿ ಬ್ಯಾಂಕಿಂಗ್, ಲೋಹ ವಲಯದ ಷೇರುಗಳು ಅತಿಯಾದ ಮಾರಾಟದ ಒತ್ತಡಕ್ಕೆ ಒಳಗಾದವು.</p>.<p>ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್ಇ) 236 ಅಂಶ ಇಳಿಕೆ ಕಂಡು ಎರಡು ವಾರಗಳ ಕನಿಷ್ಠ ಮಟ್ಟವಾದ 33,775 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್ಎಸ್ಇ) ನಿಫ್ಟಿ 74 ಅಂಶ ಇಳಿಕೆಯಾಗಿ 10,378 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.</p>.<p>ಷೇರುಪೇಟೆಯಲ್ಲಿ ಹೂಡಿಕೆ ಚಟುವಟಿಕೆಯ ಮೇಲೆ ದೇಶಿ ವಿದ್ಯಮಾನಗಳ ಪ್ರಭಾವ ಮುಂದುವರಿಯಲಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣವು ಷೇರುಪೇಟೆಯಲ್ಲಿ ಸೃಷ್ಟಿಸಿರುವ ಒತ್ತಡ ಸದ್ಯದ ಮಟ್ಟಿಗೆ ತಗ್ಗುವ ಸಾಧ್ಯತೆ ಕಂಡುಬರುತ್ತಿಲ್ಲ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವೀಸಸ್ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ತೈಲ ಬೆಲೆ ಮತ್ತೆ ಚೇತರಿಕೆ ಕಂಡುಕೊಳ್ಳುತ್ತಿದೆ. ಇದು ದೇಶದ ವಿತ್ತೀಯ ಕೊರತೆ ಅಂತರವನ್ನು ಹೆಚ್ಚಿಸುವ ಆತಂಕ ಸೃಷ್ಟಿಸಿರುವುದೂ ಸಹ ಎಚ್ಚರಿಕೆಯ ವಹಿವಾಟು ನಡೆಯುವಂತೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ವಂಚನೆ ಪ್ರಕರಣವು ಹೂಡಿಕೆ ಚಟುವಟಿಕೆಯನ್ನು ಗಮನಾರ್ಹವಾಗಿ ತಗ್ಗಿಸಿದೆ. ಇದರಿಂದ ದೇಶದ ಷೇರುಪೇಟೆಗಳಲ್ಲಿ ಇಳಿಮುಖ ವಹಿವಾಟು ನಡೆಯುತ್ತಿದೆ.</p>.<p>ಸೋಮವಾರದ ವಹಿವಾಟಿನಲ್ಲಿ ಬ್ಯಾಂಕಿಂಗ್, ಲೋಹ ವಲಯದ ಷೇರುಗಳು ಅತಿಯಾದ ಮಾರಾಟದ ಒತ್ತಡಕ್ಕೆ ಒಳಗಾದವು.</p>.<p>ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್ಇ) 236 ಅಂಶ ಇಳಿಕೆ ಕಂಡು ಎರಡು ವಾರಗಳ ಕನಿಷ್ಠ ಮಟ್ಟವಾದ 33,775 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್ಎಸ್ಇ) ನಿಫ್ಟಿ 74 ಅಂಶ ಇಳಿಕೆಯಾಗಿ 10,378 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.</p>.<p>ಷೇರುಪೇಟೆಯಲ್ಲಿ ಹೂಡಿಕೆ ಚಟುವಟಿಕೆಯ ಮೇಲೆ ದೇಶಿ ವಿದ್ಯಮಾನಗಳ ಪ್ರಭಾವ ಮುಂದುವರಿಯಲಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣವು ಷೇರುಪೇಟೆಯಲ್ಲಿ ಸೃಷ್ಟಿಸಿರುವ ಒತ್ತಡ ಸದ್ಯದ ಮಟ್ಟಿಗೆ ತಗ್ಗುವ ಸಾಧ್ಯತೆ ಕಂಡುಬರುತ್ತಿಲ್ಲ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವೀಸಸ್ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ತೈಲ ಬೆಲೆ ಮತ್ತೆ ಚೇತರಿಕೆ ಕಂಡುಕೊಳ್ಳುತ್ತಿದೆ. ಇದು ದೇಶದ ವಿತ್ತೀಯ ಕೊರತೆ ಅಂತರವನ್ನು ಹೆಚ್ಚಿಸುವ ಆತಂಕ ಸೃಷ್ಟಿಸಿರುವುದೂ ಸಹ ಎಚ್ಚರಿಕೆಯ ವಹಿವಾಟು ನಡೆಯುವಂತೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>