<p><strong>ಮೈಸೂರು:</strong> ವಿದ್ಯುದೀಕರಣಗೊಂಡಿರುವ ಬೆಂಗಳೂರು– ಮೈಸೂರು ಜೋಡಿ ರೈಲು ಮಾರ್ಗಕ್ಕೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಹಸಿರುನಿಶಾನೆ ತೋರಿದರು.</p>.<p>ಮೈಸೂರು ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದಯಪುರ– ಮೈಸೂರು ನಡುವಿನ ‘ಪ್ಯಾಲೇಸ್ ಕ್ವೀನ್ ಹಮ್ಸಫರ್’ ನೂತನ ರೈಲಿಗೂ ಚಾಲನೆ ನೀಡಿದರು.</p>.<p>‘ದಶಕದ ಬೇಡಿಕೆಯಾದ ಮೈಸೂರಿಗರ ರೈಲುಮಾರ್ಗ ವಿದ್ಯುದೀಕರಣದ ಕನಸು ಈಗ ಈಡೇರಿದೆ. ಅಲ್ಲದೇ, ಉದಯಪುರ– ಮೈಸೂರು ನಡುವೆ ರೈಲು ಸಂಚಾರ ಆರಂಭವಾಗುತ್ತಿರುವುದು ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಲಿವೆ’ ಎಂದು ಮೋದಿ ಅಭಿಪ್ರಾಯಪಟ್ಟರು.</p>.<p>ಸ್ಯಾಟಲೈಟ್ ರೈಲು ನಿಲ್ದಾಣ: ಮೈಸೂರು ತಾಲ್ಲೂಕಿನ ನಾಗನಹಳ್ಳಿಯಲ್ಲಿ ಸ್ಯಾಟಲೈಟ್ ರೈಲು ನಿಲ್ದಾಣ ನಿರ್ಮಾಣಕ್ಕೂ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ಒಟ್ಟು ₹789.29 ಕೋಟಿಯನ್ನು ಕೇಂದ್ರ ಬಜೆಟ್ನಲ್ಲಿ ಮೀಸಲಿರಿಸಿದ್ದು, 347 ಎಕರೆ ಜಾಗವನ್ನು ನಿಲ್ದಾಣಕ್ಕಾಗಿ ಗುರುತಿಸಲಾಗಿದೆ. ಮೈಸೂರಿಗೆ ಹಾಲಿ 76 ರೈಲುಗಳು ಸಂಚರಿಸುತ್ತಿದ್ದು, ಭವಿಷ್ಯದಲ್ಲಿ ಈ ಸಂಖ್ಯೆ ಹೆಚ್ಚಲಿದೆ ಎಂದು ಹೇಳಿದರು.</p>.<p>ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ರೈಲ್ವೆ ಸಚಿವ ಪಿಯೂಷ್ ಗೋಯೆಲ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್ ಉಪಸ್ಥಿತರಿದ್ದರು.</p>.<p><strong>ಬೆಂಗಳೂರು– ಮೈಸೂರು ಅಷ್ಟಪಥ ರಸ್ತೆ</strong></p>.<p>₹ 6,400 ಕೋಟಿ ವೆಚ್ಚದ ಬೆಂಗಳೂರು– ನಿಡಘಟ್ಟ– ಮೈಸೂರು ನಡುವಿನ 117 ಕಿಲೋ ಮಿಟರ್ ಉದ್ದದ ಅಷ್ಟಪಥ ಹೆದ್ದಾರಿ ನಿರ್ಮಾಣಕ್ಕೂ ಪ್ರಧಾನಿ ಚಾಲನೆ ನೀಡಿದರು.</p>.<p>ಬೆಂಗಳೂರು– ಮೈಸೂರು ರಸ್ತೆ ವಿಸ್ತರಣೆಯೂ ಬಹಳ ದಿನಗಳ ಬೇಡಿಕೆಯಾಗಿತ್ತು. ಈ ಕೆಲಸ ಪೂರ್ಣಗೊಂಡರೆ ಈ ಎರಡೂ ನಗರಗಳ ನಡುವಿನ ಸಂಚಾರ ಸುಗಮವಾಗಲಿದೆ. ಪ್ರವಾಸಿ ಕೇಂದ್ರವಾಗಿ ಬೆಳವಣಿಗೆ ಕಂಡಿರುವ ಮೈಸೂರಿಗೆ ಹೆಚ್ಚು ಅನುಕೂಲ ಆಗುತ್ತದೆ. ಇದೆಲ್ಲ ಕೇಂದ್ರ ಸರ್ಕಾರದ ಕೊಡುಗೆ. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಾಕಷ್ಟು ನೆರವು ನೀಡುತ್ತಿದೆ ಎಂದು ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ವಿದ್ಯುದೀಕರಣಗೊಂಡಿರುವ ಬೆಂಗಳೂರು– ಮೈಸೂರು ಜೋಡಿ ರೈಲು ಮಾರ್ಗಕ್ಕೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಹಸಿರುನಿಶಾನೆ ತೋರಿದರು.</p>.<p>ಮೈಸೂರು ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದಯಪುರ– ಮೈಸೂರು ನಡುವಿನ ‘ಪ್ಯಾಲೇಸ್ ಕ್ವೀನ್ ಹಮ್ಸಫರ್’ ನೂತನ ರೈಲಿಗೂ ಚಾಲನೆ ನೀಡಿದರು.</p>.<p>‘ದಶಕದ ಬೇಡಿಕೆಯಾದ ಮೈಸೂರಿಗರ ರೈಲುಮಾರ್ಗ ವಿದ್ಯುದೀಕರಣದ ಕನಸು ಈಗ ಈಡೇರಿದೆ. ಅಲ್ಲದೇ, ಉದಯಪುರ– ಮೈಸೂರು ನಡುವೆ ರೈಲು ಸಂಚಾರ ಆರಂಭವಾಗುತ್ತಿರುವುದು ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಲಿವೆ’ ಎಂದು ಮೋದಿ ಅಭಿಪ್ರಾಯಪಟ್ಟರು.</p>.<p>ಸ್ಯಾಟಲೈಟ್ ರೈಲು ನಿಲ್ದಾಣ: ಮೈಸೂರು ತಾಲ್ಲೂಕಿನ ನಾಗನಹಳ್ಳಿಯಲ್ಲಿ ಸ್ಯಾಟಲೈಟ್ ರೈಲು ನಿಲ್ದಾಣ ನಿರ್ಮಾಣಕ್ಕೂ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ಒಟ್ಟು ₹789.29 ಕೋಟಿಯನ್ನು ಕೇಂದ್ರ ಬಜೆಟ್ನಲ್ಲಿ ಮೀಸಲಿರಿಸಿದ್ದು, 347 ಎಕರೆ ಜಾಗವನ್ನು ನಿಲ್ದಾಣಕ್ಕಾಗಿ ಗುರುತಿಸಲಾಗಿದೆ. ಮೈಸೂರಿಗೆ ಹಾಲಿ 76 ರೈಲುಗಳು ಸಂಚರಿಸುತ್ತಿದ್ದು, ಭವಿಷ್ಯದಲ್ಲಿ ಈ ಸಂಖ್ಯೆ ಹೆಚ್ಚಲಿದೆ ಎಂದು ಹೇಳಿದರು.</p>.<p>ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ರೈಲ್ವೆ ಸಚಿವ ಪಿಯೂಷ್ ಗೋಯೆಲ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್ ಉಪಸ್ಥಿತರಿದ್ದರು.</p>.<p><strong>ಬೆಂಗಳೂರು– ಮೈಸೂರು ಅಷ್ಟಪಥ ರಸ್ತೆ</strong></p>.<p>₹ 6,400 ಕೋಟಿ ವೆಚ್ಚದ ಬೆಂಗಳೂರು– ನಿಡಘಟ್ಟ– ಮೈಸೂರು ನಡುವಿನ 117 ಕಿಲೋ ಮಿಟರ್ ಉದ್ದದ ಅಷ್ಟಪಥ ಹೆದ್ದಾರಿ ನಿರ್ಮಾಣಕ್ಕೂ ಪ್ರಧಾನಿ ಚಾಲನೆ ನೀಡಿದರು.</p>.<p>ಬೆಂಗಳೂರು– ಮೈಸೂರು ರಸ್ತೆ ವಿಸ್ತರಣೆಯೂ ಬಹಳ ದಿನಗಳ ಬೇಡಿಕೆಯಾಗಿತ್ತು. ಈ ಕೆಲಸ ಪೂರ್ಣಗೊಂಡರೆ ಈ ಎರಡೂ ನಗರಗಳ ನಡುವಿನ ಸಂಚಾರ ಸುಗಮವಾಗಲಿದೆ. ಪ್ರವಾಸಿ ಕೇಂದ್ರವಾಗಿ ಬೆಳವಣಿಗೆ ಕಂಡಿರುವ ಮೈಸೂರಿಗೆ ಹೆಚ್ಚು ಅನುಕೂಲ ಆಗುತ್ತದೆ. ಇದೆಲ್ಲ ಕೇಂದ್ರ ಸರ್ಕಾರದ ಕೊಡುಗೆ. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಾಕಷ್ಟು ನೆರವು ನೀಡುತ್ತಿದೆ ಎಂದು ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>