<p><strong>ನವದೆಹಲಿ:</strong> ಕರಾವಳಿ ಜಿಲ್ಲೆಗಳ ಜನಪ್ರಿಯ ಕ್ರೀಡೆಯಾದ ಕಂಬಳಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯ ವಿಧಾನಸಭೆಯು ಕಳೆದ ನವೆಂಬರ್ 17ರಂದು ಅಂಗೀಕರಿಸಿದ್ದ ಪ್ರಾಣಿ ಹಿಂಸೆ ತಡೆ (ತಿದ್ದುಪಡಿ) ಮಸೂದೆ– 2017ಕ್ಕೆ ರಾಷ್ಟ್ರಪತಿಯವರ ಅಂಕಿತ ದೊರೆತಿದೆ.</p>.<p>ಫೆಬ್ರುವರಿ 10ರಂದು ತಿದ್ದುಪಡಿ ಮಸೂದೆಗೂ ರಾಷ್ಟ್ರಪತಿಯವರು ಅಂಕಿತ ದೊರೆತಿದೆ. ಸೋಮವಾರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರದ ಗೃಹ ಸಚಿವಾಲಯವು ಇದನ್ನು ಖಚಿತಪಡಿಸಿದೆ.</p>.<p>ಕಳೆದ ವರ್ಷದ ಆರಂಭದಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲಾಗಿದ್ದ ಈ ತಿದ್ದುಪಡಿ ಮಸೂದೆಯನ್ನು ರಾಷ್ಟ್ರಪತಿಯವರು ಹಿಂದಕ್ಕೆ ಕಳುಹಿಸಿದ್ದರಿಂದ ಕೆಲವು ಬದಲಾವಣೆಗಳೊಂದಿಗೆ ಮತ್ತೆ ಅಂಕಿತಕ್ಕೆ ಕಳುಹಿಸಲಾಗಿತ್ತು.</p>.<p>ಕೋಣಗಳನ್ನು ಓಡಿಸುವ ಕ್ರೀಡೆಯಾದ ಕಂಬಳ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಜನಪ್ರಿಯವಾಗಿರುವ ಹೋರಿ ಬೆದರಿಸುವ ಸ್ಪರ್ಧೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಸುಗ್ರೀವಾಜ್ಞೆಗೂ ರಾಷ್ಟ್ರಪತಿಯವರ ಅಂಕಿತ ದೊರತಿತ್ತು.</p>.<p>ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ಸ್ವಯಂ ಸೇವಾ ಸಂಘಟನೆಯಾದ ಪೆಟಾ ಇಂಡಿಯಾ, ಕಂಬಳ ಕ್ರೀಡೆಯಲ್ಲಿ ಭಾಗವಹಿಸುವ ಕೋಣಗಳನ್ನು ಹಿಂಸಿಸುವುದರಿಂದ ಅವಕಾಶ ನೀಡಬಾರದು ಎಂದು ಕೋರಿತ್ತು.</p>.<p>ತಮಿಳುನಾಡಿನಲ್ಲಿ ಆಚರಣೆಯಲ್ಲಿರುವ ಜಲ್ಲಿಕಟ್ಟು ಕ್ರೀಡೆಯನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರಿಂದ ಅಲ್ಲಿನ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಅವಕಾಶ ಕಲ್ಪಿಸಿತ್ತು. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿತ್ತು.</p>.<p>ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರ ಅಂಕಿತ ದೊರೆತಿರುವುದರಿಂದ ಕಂಬಳ ಮತ್ತು ಹೋರಿ ಬೆದರಿಸುವ ಸ್ಪರ್ಧೆಗಳಿಗೆ ಎದುರಾಗಿದ್ದ ಆತಂಕ ದೂರವಾದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರಾವಳಿ ಜಿಲ್ಲೆಗಳ ಜನಪ್ರಿಯ ಕ್ರೀಡೆಯಾದ ಕಂಬಳಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯ ವಿಧಾನಸಭೆಯು ಕಳೆದ ನವೆಂಬರ್ 17ರಂದು ಅಂಗೀಕರಿಸಿದ್ದ ಪ್ರಾಣಿ ಹಿಂಸೆ ತಡೆ (ತಿದ್ದುಪಡಿ) ಮಸೂದೆ– 2017ಕ್ಕೆ ರಾಷ್ಟ್ರಪತಿಯವರ ಅಂಕಿತ ದೊರೆತಿದೆ.</p>.<p>ಫೆಬ್ರುವರಿ 10ರಂದು ತಿದ್ದುಪಡಿ ಮಸೂದೆಗೂ ರಾಷ್ಟ್ರಪತಿಯವರು ಅಂಕಿತ ದೊರೆತಿದೆ. ಸೋಮವಾರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರದ ಗೃಹ ಸಚಿವಾಲಯವು ಇದನ್ನು ಖಚಿತಪಡಿಸಿದೆ.</p>.<p>ಕಳೆದ ವರ್ಷದ ಆರಂಭದಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲಾಗಿದ್ದ ಈ ತಿದ್ದುಪಡಿ ಮಸೂದೆಯನ್ನು ರಾಷ್ಟ್ರಪತಿಯವರು ಹಿಂದಕ್ಕೆ ಕಳುಹಿಸಿದ್ದರಿಂದ ಕೆಲವು ಬದಲಾವಣೆಗಳೊಂದಿಗೆ ಮತ್ತೆ ಅಂಕಿತಕ್ಕೆ ಕಳುಹಿಸಲಾಗಿತ್ತು.</p>.<p>ಕೋಣಗಳನ್ನು ಓಡಿಸುವ ಕ್ರೀಡೆಯಾದ ಕಂಬಳ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಜನಪ್ರಿಯವಾಗಿರುವ ಹೋರಿ ಬೆದರಿಸುವ ಸ್ಪರ್ಧೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಸುಗ್ರೀವಾಜ್ಞೆಗೂ ರಾಷ್ಟ್ರಪತಿಯವರ ಅಂಕಿತ ದೊರತಿತ್ತು.</p>.<p>ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ಸ್ವಯಂ ಸೇವಾ ಸಂಘಟನೆಯಾದ ಪೆಟಾ ಇಂಡಿಯಾ, ಕಂಬಳ ಕ್ರೀಡೆಯಲ್ಲಿ ಭಾಗವಹಿಸುವ ಕೋಣಗಳನ್ನು ಹಿಂಸಿಸುವುದರಿಂದ ಅವಕಾಶ ನೀಡಬಾರದು ಎಂದು ಕೋರಿತ್ತು.</p>.<p>ತಮಿಳುನಾಡಿನಲ್ಲಿ ಆಚರಣೆಯಲ್ಲಿರುವ ಜಲ್ಲಿಕಟ್ಟು ಕ್ರೀಡೆಯನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರಿಂದ ಅಲ್ಲಿನ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಅವಕಾಶ ಕಲ್ಪಿಸಿತ್ತು. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿತ್ತು.</p>.<p>ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರ ಅಂಕಿತ ದೊರೆತಿರುವುದರಿಂದ ಕಂಬಳ ಮತ್ತು ಹೋರಿ ಬೆದರಿಸುವ ಸ್ಪರ್ಧೆಗಳಿಗೆ ಎದುರಾಗಿದ್ದ ಆತಂಕ ದೂರವಾದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>