ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಾಗಿರುವ ಲಲಿತ್ ಮೋದಿ ಮತ್ತು ₹ 9,000 ಕೋಟಿ ರೂಪಾಯಿ ಸಾಲ ಮರುಪಾವತಿ ಮಾಡದೆ ಲಂಡನ್ನಲ್ಲಿ ನೆಲೆಸಿರುವ ಮಲ್ಯ ಅವರನ್ನು ಕರೆತರುವ ಉದ್ದೇಶಕ್ಕಾಗಿ ಎಷ್ಟು ಖರ್ಚು ಮಾಡಲಾಗಿದೆ ಎಂದು ಪ್ರಶ್ನಿಸಿ ಪುಣೆಯ ಮಾಹಿತಿ ಹಕ್ಕು ಹೋರಾಟಗಾರ ವಿಹಾರ್ ಧ್ರುವೆ ಹಣಕಾಸು ಸಚಿವಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸಚಿವಾಲಯ ಈ ಅರ್ಜಿಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ನಂತರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗಿತ್ತು.