ಅಕ್ಷತಾ ಸಂಜೆ 4.30 ಕ್ಕೆ ಕಾಲೇಜಿನಿಂದ ಬಸ್ನಿಲ್ದಾಣದ ಕಡೆಗೆ ಬರುತ್ತಿದ್ದಾಗ ಬಿಎಸ್ಎನ್ಎಲ್ ಕಚೇರಿ ಬಳಿ ಆಕೆಯ ಎದುರು ಬಂದ ಕಾರ್ತಿಕ್ ತನ್ನ ಕೈಯಲ್ಲಿದ್ದ ಚಾಕುವಿನಿಂದ 6 ಬಾರಿ ಇರಿದಿದ್ದ. ಗಂಭೀರ ಗಾಯಗೊಂಡ ವಿದ್ಯಾರ್ಥಿನಿ ಅಲ್ಲೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಕಾರ್ತಿಕ್ನನ್ನು ಸಾರ್ವಜನಿಕರೇ ಹಿಡಿದು ಪೊಲೀಸರ ವಶಕ್ಕೆ ನೀಡಿದ್ದು, ಪ್ರಕರಣ ದಾಖಲಾಗಿದೆ.