ಕಳೆದ ಸೆಪ್ಟೆಂಬರ್ನಲ್ಲಿ ನಡೆದಿದ್ದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಕಮಲ್ ಹಾಸನ್ ಅವರು ಹೊಸ ರಾಜಕೀಯ ಪಕ್ಷ ಆರಂಭಿಸುವ ಸುಳಿವು ನೀಡಿದ್ದರು. ಆ ಸಂದರ್ಭದಲ್ಲಿ ಮಾತನಾಡಿದ್ದ ಕೇಜ್ರಿವಾಲ್, ’ಎಲ್ಲೆಡೆ ಭ್ರಷ್ಟಾಚಾರ ತಾಂಡವವಾಡುತ್ತಿರುವ ಸಂದರ್ಭದಲ್ಲಿ ಇಂಥದ್ದೊಂದು ಹೆಜ್ಜೆ ಅವಶ್ಯಕತೆ ಇದೆ. ಭ್ರಷ್ಟಾಚಾರ ಕಿತ್ತುಹಾಕಲು ಸಮಾನ ಮನಸ್ಕರು ಸೇರಿ ಆಲೋಚನೆ ಮಾಡುವ ಅಗತ್ಯವಿದೆ’ ಎಂದಿದ್ದರು.