<p><strong>ನವದೆಹಲಿ (ಪಿಟಿಐ): </strong>ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಸೋಮವಾರ ರಾತ್ರಿ ಆಮ್ ಆದ್ಮಿ ಪಕ್ಷದ(ಎಎಪಿ) ಇಬ್ಬರು ಶಾಸಕರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಆರೋಪಿಸಿದ್ದಾರೆ.</p>.<p>ಈ ಬಗ್ಗೆ ಸ್ವತಃ ಅಂಶು ಪ್ರಕಾಶ್ ಅವರು ಮಂಗಳವಾರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ.</p>.<p>ಎಎಪಿ ಶಾಸಕರಾದ ಅಜಯ್ ದತ್ ಮತ್ತು ಪ್ರಕಾಶ್ ಜರ್ವಾಲ್ ವಿರುದ್ಧ ಪೊಲೀಸರಿಗೂ ದೂರು ನೀಡಿದ್ದಾರೆ.</p>.<p>ಆದರೆ, ಈ ಆರೋಪವನ್ನು ಮುಖ್ಯಮಂತ್ರಿ ಕಚೇರಿ ನಿರಾಕರಿಸಿದೆ. ‘ಪಕ್ಷದ ಶಾಸಕರು ಯಾರ ಮೇಲೂ ಹಲ್ಲೆ ನಡೆಸಿಲ್ಲ. ಮುಖ್ಯ ಕಾರ್ಯದರ್ಶಿಯೇ ಶಾಸಕರ ಜತೆ ಅನುಚಿತವಾಗಿ ವರ್ತಿಸಿದ್ದಾರೆ’ ಎಂದು ಎಎಪಿ ಹೇಳಿದೆ.</p>.<p>ದೆಹಲಿ ನಾಗರಿಕ ಸೇವಾ (ಡಿಎಎಸ್) ಅಧಿಕಾರಿಗಳು ಮತ್ತು ಎಎಪಿ ಶಾಸಕರ ನಡುವಿನ ಜಟಾಪಟಿಯಿಂದ ಸಚಿವಾಲಯ ರಣರಂಗವಾಗಿತ್ತು.</p>.<p><strong>ವರದಿ ಕೇಳಿದ ರಾಜನಾಥ ಸಿಂಗ್: </strong>ಈ ಘಟನೆಯ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಲೆಫ್ಟಿನೆಂಟ್ ಅನಿಲ್ ಬೈಜಾಲ್ ಅವರಿಂದ ವರದಿ ಕೇಳಿದ್ದಾರೆ.</p>.<p>ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರು ಸಚಿವರನ್ನು ಭೇಟಿಯಾಗಿ ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಗೃಹ ಸಚಿವಾಲಯ ವರದಿ ಕೇಳಿದೆ.</p>.<p>ಯಾವುದೇ ತನಿಖೆ ಇಲ್ಲದೆ ಕೇಂದ್ರ ಗೃಹ ಸಚಿವರು ಎಎಪಿ ತಪ್ಪುಗಳನ್ನು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಎಎಪಿ ಟೀಕಿಸಿದೆ.</p>.<p>ಪ್ರತಿಭಟನಾ ನಿರತ ಅಧಿಕಾರಿಗಳು ಮುಖ್ಯಮಂತ್ರಿ ಮತ್ತು ಎಎಪಿ ವಿರುದ್ಧ ಘೋಷಣೆ ಕೂಗಿದರು. ಪರಿಸರ ಖಾತೆ ಸಚಿವ ಇಮ್ರಾನ್ ಹುಸೇನ್ ಅವರಿಗೆ ಮುತ್ತಿಗೆ ಹಾಕಿದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.</p>.<p>ಪ್ರತಿಭಟನಾನಿರತರು ತಮ್ಮ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಚಿವ ಇಮ್ರಾನ್ ಹುಸೇನ್ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಸಂಜೆ ರಾಜಘಾಟ್ನಲ್ಲಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದ ಅಧಿಕಾರಿಗಳು, ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಕೂಡ ಇದಕ್ಕೆ ಧ್ವನಿಗೂಡಿಸಿವೆ.</p>.<p><strong>ವರದಿ ಕೇಳಿದ ರಾಜನಾಥ ಸಿಂಗ್: </strong>ಈ ಘಟನೆಯ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಲೆಫ್ಟಿನೆಂಟ್ ಅನಿಲ್ ಬೈಜಾಲ್ ಅವರಿಂದ ವರದಿ ಕೇಳಿದ್ದಾರೆ.</p>.<p>ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರು ಸಚಿವರನ್ನು ಭೇಟಿಯಾಗಿ ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಗೃಹ ಸಚಿವಾಲಯ ವರದಿ ಕೇಳಿದೆ.</p>.<p>ಯಾವುದೇ ತನಿಖೆ ಇಲ್ಲದೆ ಕೇಂದ್ರ ಗೃಹ ಸಚಿವರು ಎಎಪಿ ತಪ್ಪುಗಳನ್ನು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಎಎಪಿ ಟೀಕಿಸಿದೆ.</p>.<p><strong>ಮುಖ್ಯ ಕಾರ್ಯದರ್ಶಿ ಆರೋಪ</strong></p>.<p>ಜಾಹೀರಾತು ಕುರಿತು ಚರ್ಚಿಸಲು ಸೋಮವಾರ ರಾತ್ರಿ ತಮ್ಮನ್ನು ಕರೆಸಿಕೊಂಡ ಮುಖ್ಯಮಂತ್ರಿ, ಕೊಠಡಿಯೊಂದರಲ್ಲಿ ಕೂಡಿಹಾಕಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚಿಸಿದರು.</p>.<p>ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೆಲಸ ಮಾಡುವುದಾಗಿ ಹೇಳಿದಾಗ ಸಿಟ್ಟಿಗೆದ್ದ 11 ಶಾಸಕರು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಕೆಲವು ಶಾಸಕರು ತಮ್ಮನ್ನು ಥಳಿಸಿದರು.</p>.<p><strong>ಎಎಪಿ ಪ್ರತ್ಯಾರೋಪ</strong></p>.<p>ಜನರಿಗೆ ಚಿಕಿತ್ಸೆ, ಔಷಧಿ, ನೀರು ಸೇರಿದಂತೆ ಇನ್ನಿತರ ಮೂಲಸೌಕರ್ಯ ಸಿಗುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಎಂದು ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದರು.</p>.<p>‘ಲೆಫ್ಟಿನೆಂಟ್ ಗವರ್ನರ್ಗೆ ಮಾತ್ರ ನನ್ನನ್ನು ಪ್ರಶ್ನಿಸುವ ಅಧಿಕಾರವಿದೆ. ಮುಖ್ಯಮಂತ್ರಿ ಮತ್ತು ಶಾಸಕರಿಗೆ ಈ ಅಧಿಕಾರ ಇಲ್ಲ’ ಎಂದು ಅವರು ಉಡಾಫೆಯಿಂದ ಉತ್ತರಿಸಿದರು. ಜತೆಗೆ ಕೆಲವು ಶಾಸಕರನ್ನು ಜಾತಿ ಹೆಸರಿನಿಂದ ನಿಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಸೋಮವಾರ ರಾತ್ರಿ ಆಮ್ ಆದ್ಮಿ ಪಕ್ಷದ(ಎಎಪಿ) ಇಬ್ಬರು ಶಾಸಕರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಆರೋಪಿಸಿದ್ದಾರೆ.</p>.<p>ಈ ಬಗ್ಗೆ ಸ್ವತಃ ಅಂಶು ಪ್ರಕಾಶ್ ಅವರು ಮಂಗಳವಾರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ.</p>.<p>ಎಎಪಿ ಶಾಸಕರಾದ ಅಜಯ್ ದತ್ ಮತ್ತು ಪ್ರಕಾಶ್ ಜರ್ವಾಲ್ ವಿರುದ್ಧ ಪೊಲೀಸರಿಗೂ ದೂರು ನೀಡಿದ್ದಾರೆ.</p>.<p>ಆದರೆ, ಈ ಆರೋಪವನ್ನು ಮುಖ್ಯಮಂತ್ರಿ ಕಚೇರಿ ನಿರಾಕರಿಸಿದೆ. ‘ಪಕ್ಷದ ಶಾಸಕರು ಯಾರ ಮೇಲೂ ಹಲ್ಲೆ ನಡೆಸಿಲ್ಲ. ಮುಖ್ಯ ಕಾರ್ಯದರ್ಶಿಯೇ ಶಾಸಕರ ಜತೆ ಅನುಚಿತವಾಗಿ ವರ್ತಿಸಿದ್ದಾರೆ’ ಎಂದು ಎಎಪಿ ಹೇಳಿದೆ.</p>.<p>ದೆಹಲಿ ನಾಗರಿಕ ಸೇವಾ (ಡಿಎಎಸ್) ಅಧಿಕಾರಿಗಳು ಮತ್ತು ಎಎಪಿ ಶಾಸಕರ ನಡುವಿನ ಜಟಾಪಟಿಯಿಂದ ಸಚಿವಾಲಯ ರಣರಂಗವಾಗಿತ್ತು.</p>.<p><strong>ವರದಿ ಕೇಳಿದ ರಾಜನಾಥ ಸಿಂಗ್: </strong>ಈ ಘಟನೆಯ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಲೆಫ್ಟಿನೆಂಟ್ ಅನಿಲ್ ಬೈಜಾಲ್ ಅವರಿಂದ ವರದಿ ಕೇಳಿದ್ದಾರೆ.</p>.<p>ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರು ಸಚಿವರನ್ನು ಭೇಟಿಯಾಗಿ ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಗೃಹ ಸಚಿವಾಲಯ ವರದಿ ಕೇಳಿದೆ.</p>.<p>ಯಾವುದೇ ತನಿಖೆ ಇಲ್ಲದೆ ಕೇಂದ್ರ ಗೃಹ ಸಚಿವರು ಎಎಪಿ ತಪ್ಪುಗಳನ್ನು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಎಎಪಿ ಟೀಕಿಸಿದೆ.</p>.<p>ಪ್ರತಿಭಟನಾ ನಿರತ ಅಧಿಕಾರಿಗಳು ಮುಖ್ಯಮಂತ್ರಿ ಮತ್ತು ಎಎಪಿ ವಿರುದ್ಧ ಘೋಷಣೆ ಕೂಗಿದರು. ಪರಿಸರ ಖಾತೆ ಸಚಿವ ಇಮ್ರಾನ್ ಹುಸೇನ್ ಅವರಿಗೆ ಮುತ್ತಿಗೆ ಹಾಕಿದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.</p>.<p>ಪ್ರತಿಭಟನಾನಿರತರು ತಮ್ಮ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಚಿವ ಇಮ್ರಾನ್ ಹುಸೇನ್ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಸಂಜೆ ರಾಜಘಾಟ್ನಲ್ಲಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದ ಅಧಿಕಾರಿಗಳು, ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಕೂಡ ಇದಕ್ಕೆ ಧ್ವನಿಗೂಡಿಸಿವೆ.</p>.<p><strong>ವರದಿ ಕೇಳಿದ ರಾಜನಾಥ ಸಿಂಗ್: </strong>ಈ ಘಟನೆಯ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಲೆಫ್ಟಿನೆಂಟ್ ಅನಿಲ್ ಬೈಜಾಲ್ ಅವರಿಂದ ವರದಿ ಕೇಳಿದ್ದಾರೆ.</p>.<p>ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರು ಸಚಿವರನ್ನು ಭೇಟಿಯಾಗಿ ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಗೃಹ ಸಚಿವಾಲಯ ವರದಿ ಕೇಳಿದೆ.</p>.<p>ಯಾವುದೇ ತನಿಖೆ ಇಲ್ಲದೆ ಕೇಂದ್ರ ಗೃಹ ಸಚಿವರು ಎಎಪಿ ತಪ್ಪುಗಳನ್ನು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಎಎಪಿ ಟೀಕಿಸಿದೆ.</p>.<p><strong>ಮುಖ್ಯ ಕಾರ್ಯದರ್ಶಿ ಆರೋಪ</strong></p>.<p>ಜಾಹೀರಾತು ಕುರಿತು ಚರ್ಚಿಸಲು ಸೋಮವಾರ ರಾತ್ರಿ ತಮ್ಮನ್ನು ಕರೆಸಿಕೊಂಡ ಮುಖ್ಯಮಂತ್ರಿ, ಕೊಠಡಿಯೊಂದರಲ್ಲಿ ಕೂಡಿಹಾಕಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚಿಸಿದರು.</p>.<p>ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೆಲಸ ಮಾಡುವುದಾಗಿ ಹೇಳಿದಾಗ ಸಿಟ್ಟಿಗೆದ್ದ 11 ಶಾಸಕರು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಕೆಲವು ಶಾಸಕರು ತಮ್ಮನ್ನು ಥಳಿಸಿದರು.</p>.<p><strong>ಎಎಪಿ ಪ್ರತ್ಯಾರೋಪ</strong></p>.<p>ಜನರಿಗೆ ಚಿಕಿತ್ಸೆ, ಔಷಧಿ, ನೀರು ಸೇರಿದಂತೆ ಇನ್ನಿತರ ಮೂಲಸೌಕರ್ಯ ಸಿಗುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಎಂದು ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದರು.</p>.<p>‘ಲೆಫ್ಟಿನೆಂಟ್ ಗವರ್ನರ್ಗೆ ಮಾತ್ರ ನನ್ನನ್ನು ಪ್ರಶ್ನಿಸುವ ಅಧಿಕಾರವಿದೆ. ಮುಖ್ಯಮಂತ್ರಿ ಮತ್ತು ಶಾಸಕರಿಗೆ ಈ ಅಧಿಕಾರ ಇಲ್ಲ’ ಎಂದು ಅವರು ಉಡಾಫೆಯಿಂದ ಉತ್ತರಿಸಿದರು. ಜತೆಗೆ ಕೆಲವು ಶಾಸಕರನ್ನು ಜಾತಿ ಹೆಸರಿನಿಂದ ನಿಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>