<p><strong>ನವದೆಹಲಿ:</strong> ಮುಂಬೈ ಬಳಿಯ ಅಲಿಬಾಗ್ನಲ್ಲಿರುವ ನೀರವ್ ಮೋದಿಯ ₹32 ಕೋಟಿ ವೆಚ್ಚದ ಐಷಾರಾಮಿ ತೋಟದ ಮನೆಯನ್ನು ಸಿಬಿಐ ಅಧಿಕಾರಿಗಳು ಬುಧವಾರ ಬೀಗ ಜಡಿದಿದ್ದಾರೆ.</p>.<p>ಮತ್ತೊಂದೆಡೆ ಮುಂಬೈನ ನಾಲ್ಕು ಶೆಲ್ ಕಂಪನಿ ಸೇರಿದಂತೆ ದೇಶದ 17 ಕಡೆಗಳಲ್ಲಿ ಹೊಸದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯಕೈಗೊಂಡಿದ್ದಾರೆ.</p>.<p>ಏಳು ದಿನಗಳಿಂದ ಅಧಿಕಾರಿಗಳು ನಡೆಸುತ್ತಿರುವ ಶೋಧ ಕಾರ್ಯ ಇನ್ನೂ ಮುಂದುವರಿದಿದೆ. ಇಲ್ಲಿಯವರೆಗೆ ₹5,726 ಕೋಟಿ ಮೊತ್ತದ ಚಿನ್ನಾಭರಣ, ನಗದು ಮತ್ತು ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ನೀರವ್ ಮೋದಿಯ 36ಕ್ಕೂ ಹೆಚ್ಚು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ.</p>.<p><strong>ಗ್ರಾಹಕರಿಗೆ ಪಿಎನ್ಬಿ ಅಭಯ</strong></p>.<p>ನಮ್ಮಲ್ಲಿ ಸಾಕಷ್ಟು ದುಡ್ಡು ಇದ್ದು, ಗ್ರಾಹಕರು ಆತಂಕ ಪಡಬೇಕಾಗಿಲ್ಲ ಎಂದು ಪಂಜಾಬ್ ನ್ಯಾಶನಲ್ ಬ್ಯಾಂಕ್ ಬುಧವಾರ ಅಭಯ ನೀಡಿದೆ.</p>.<p>ಹಗರಣಕ್ಕೆ ಸಿಲುಕಿದರೂ ಪರಿಸ್ಥಿತಿ ಎದುರಿಸುವ ಆರ್ಥಿಕ ಶಕ್ತಿ ಬ್ಯಾಂಕ್ಗೆ ಇದೆ. ವಹಿವಾಟಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಬ್ಯಾಂಕ್ ಟ್ವೀಟ್ ಮಾಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂಬೈ ಬಳಿಯ ಅಲಿಬಾಗ್ನಲ್ಲಿರುವ ನೀರವ್ ಮೋದಿಯ ₹32 ಕೋಟಿ ವೆಚ್ಚದ ಐಷಾರಾಮಿ ತೋಟದ ಮನೆಯನ್ನು ಸಿಬಿಐ ಅಧಿಕಾರಿಗಳು ಬುಧವಾರ ಬೀಗ ಜಡಿದಿದ್ದಾರೆ.</p>.<p>ಮತ್ತೊಂದೆಡೆ ಮುಂಬೈನ ನಾಲ್ಕು ಶೆಲ್ ಕಂಪನಿ ಸೇರಿದಂತೆ ದೇಶದ 17 ಕಡೆಗಳಲ್ಲಿ ಹೊಸದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯಕೈಗೊಂಡಿದ್ದಾರೆ.</p>.<p>ಏಳು ದಿನಗಳಿಂದ ಅಧಿಕಾರಿಗಳು ನಡೆಸುತ್ತಿರುವ ಶೋಧ ಕಾರ್ಯ ಇನ್ನೂ ಮುಂದುವರಿದಿದೆ. ಇಲ್ಲಿಯವರೆಗೆ ₹5,726 ಕೋಟಿ ಮೊತ್ತದ ಚಿನ್ನಾಭರಣ, ನಗದು ಮತ್ತು ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ನೀರವ್ ಮೋದಿಯ 36ಕ್ಕೂ ಹೆಚ್ಚು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ.</p>.<p><strong>ಗ್ರಾಹಕರಿಗೆ ಪಿಎನ್ಬಿ ಅಭಯ</strong></p>.<p>ನಮ್ಮಲ್ಲಿ ಸಾಕಷ್ಟು ದುಡ್ಡು ಇದ್ದು, ಗ್ರಾಹಕರು ಆತಂಕ ಪಡಬೇಕಾಗಿಲ್ಲ ಎಂದು ಪಂಜಾಬ್ ನ್ಯಾಶನಲ್ ಬ್ಯಾಂಕ್ ಬುಧವಾರ ಅಭಯ ನೀಡಿದೆ.</p>.<p>ಹಗರಣಕ್ಕೆ ಸಿಲುಕಿದರೂ ಪರಿಸ್ಥಿತಿ ಎದುರಿಸುವ ಆರ್ಥಿಕ ಶಕ್ತಿ ಬ್ಯಾಂಕ್ಗೆ ಇದೆ. ವಹಿವಾಟಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಬ್ಯಾಂಕ್ ಟ್ವೀಟ್ ಮಾಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>