ಉಡುಪಿ: ಅಧಿಕಾರಿಗಳಿಗೆ ಬೆದರಿಸಿ ಅಕ್ರಮ ಲಾಭ ಮಾಡಿಕೊಳ್ಳುವ ಕಾಂಗ್ರೆಸ್ ಮುಖಂಡರ ವರ್ತನೆ ಖಂಡನೀಯ. ಕಾನೂನು ರಹಿತ ಗೂಂಡಾ ರಾಜ್ಯವಾಗಿದೆ ಕರ್ನಾಟಕ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಹಲವಾರು ಘಟನೆಗಳು ನಡೆದಿವೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪ್ರವಾಸದಿಂದ ಕಾಂಗ್ರೆಸ್ ಮುಖಂಡರು ವಿಚಲಿತರಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು.
ಹಲ್ಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಸಚಿವ ಅನಂತ ಕುಮಾರ ಹೆಗಡೆ ಅವರ ಮೇಲೆ ಕ್ರಮ ಕೈಗೊಳ್ಳಬೇಡಿ ಎಂದು ನಾವು ಹೇಳಿರಲಿಲ್ಲ ಎಂದು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.