ಅಕಾಲಿದಳದ ನಾಯಕ ಮಲ್ಕಿಯತ್ ಸಿಂಗ್ ಸಿಧು ಅವರ ಮೇಲೆ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದ 1986ರ ಕರಣಕ್ಕೆ ಸಂಬಂಧಿಸಿ ಅತ್ವಾಲ್ ಮತ್ತು ಇತರ ಮೂವರನ್ನು ಅಪರಾಧಿಗಳು ಎಂದು ಪರಿಗಣಿಸಲಾಗಿತ್ತು. ಆಗ ಪಂಜಾಬ್ ಸರ್ಕಾರದಲ್ಲಿ ಸಚಿವರಾಗಿದ್ದ ಸಿಧು ಅಪಾಯದಿಂದ ಪಾರಾಗಿದ್ದರು. ಆದರೆ, 1991ರಲ್ಲಿ ಸಿಖ್ ಉಗ್ರರ ದಾಳಿಗೆ ಬಲಿಯಾಗಿದ್ದರು.