ಅಸ್ಸಾಂನ ಕೆಲ ಜಿಲ್ಲೆಗಳಲ್ಲಿ ಮುಸ್ಲಿಮರ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದೆ ಎಂಬ ವರದಿಯನ್ನು ಆಧರಿಸಿ ಮಾತನಾಡಿದ್ದ ರಾವತ್, ‘ಭಾರತ ಮೇಲೆ ಚೀನಾದ ನೆರವಿನೊಂದಿಗೆ ಪಾಕಿಸ್ತಾನ ಪರೋಕ್ಷ ಯುದ್ಧ ಸಾರುತ್ತಿದೆ. ಬಾಂಗ್ಲಾದೇಶದ ಗಡಿಯಲ್ಲಿರುವ ಅಸ್ಸಾಂಗೆ ಈ ಮೂಲಕ ಅಕ್ರಮ ಬಾಂಗ್ಲಾದೇಶೀಯರನ್ನು ರವಾನೆ ಮಾಡಿ ಈ ಪ್ರಾಂತ್ಯದಲ್ಲಿ ಅಶಾಂತಿಯನ್ನುಂಟುಮಾಡುತ್ತಿದೆ’ ಎಂದು ಹೇಳಿದ್ದರು.