ಸಿನಿಮಾ ಬಗ್ಗೆ ಮಾಹಿತಿ ನೀಡಲು ಸಾಯಿಪ್ರಕಾಶ್ ಅವರು ತಮ್ಮ ತಂಡದ ಜೊತೆ ಸುದ್ದಿಗೋಷ್ಠಿ ಕರೆದಿದ್ದರು. ಈ ಚಿತ್ರವು, ಮಹಾನ್ ವ್ಯಕ್ತಿ ಹಾಗೂ ಮಹಾನ್ ಶಕ್ತಿಯೊಂದರ ಕುರಿತ ಕಥೆ. ಈ ಕಥೆಯ ನಾಯಕನನ್ನು ದೇವರು ಎಂದು ನಂಬಿದವರೂ ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಇದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಅಷ್ಟೇ ಅಲ್ಲ, ಇವರು ಬ್ರಿಟಿಷ್ ಆಡಳಿತದ ವಿರುದ್ಧ ಹೋರಾಟ ನಡೆಸಿದ ಕ್ರಾಂತಿಕಾರಿ ಕೂಡ ಹೌದು. ಅಂದಹಾಗೆ, ಈ ಚಿತ್ರದ ಕಥಾ ನಾಯಕ ಮಾಧವಾನಂದರು.