ನವದೆಹಲಿ: ಉದ್ಯಮ ಸಂಸ್ಥೆಗಳಿಗೆ ಬ್ಯಾಂಕುಗಳು ದೊಡ್ಡ ಮೊತ್ತದ ಸಾಲ ನೀಡಿ ವಂಚನೆಗೆ ಒಳಗಾಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರವು ಹೊಸ ನಿಯಮಗಳನ್ನು ರೂಪಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ (ಪಿಎನ್ಬಿ) ಆಭರಣ ಉದ್ಯಮಿ ನೀರವ್ ಮೋದಿ ₹11,400 ಕೋಟಿ ವಂಚನೆ ಮಾಡಿರುವುದರ ಬೆನ್ನಿಗೇ ಕೇಂದ್ರ ಈ ಕ್ರಮಕ್ಕೆ ಮುಂದಾಗಿದೆ.