ಮಂಡ್ಯ ಜಿಲ್ಲೆ ಕದಲೂರು ಗ್ರಾಮದ ನವೀನ್, ಫೆ.18ರ ಸಂಜೆ 6 ಗಂಟೆ ಸುಮಾರಿಗೆ ಪಿಸ್ತೂಲ್ನೊಂದಿಗೆ ಮೆಜೆಸ್ಟಿಕ್ಗೆ ಬಂದಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿಯಿಂದ ದಾಳಿ ನಡೆಸಿದ್ದ ಸಿಸಿಬಿ ಇನ್ಸ್ಪೆಕ್ಟರ್ ಬಿ.ರಾಜು ನೇತೃತ್ವದ ತಂಡ, ಆತನನ್ನು ವಶಕ್ಕೆ ಪಡೆದು ನಾಡಪಿಸ್ತೂಲ್ ಹಾಗೂ ‘ಪಾಯಿಂಟ್ 32’ ರಿವಾಲ್ವರ್ನ ಐದು ಜೀವಂತ ಗುಂಡುಗಳನ್ನು ಜಪ್ತಿ ಮಾಡಿತ್ತು. ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.