ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಯಸುವ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲು ಕಾಂಗ್ರೆಸ್ ಮುಂದಾಗಿದೆ.
ಇದೇ 26ರಿಂದ ಅರ್ಜಿ ವಿತರಣೆ ಆರಂಭವಾಗಲಿದ್ದು, ಮಾರ್ಚ್ 5ರವರೆಗೆ ಅವಕಾಶ ಇದೆ. ಭರ್ತಿ ಮಾಡಿದ ಅರ್ಜಿಗಳನ್ನು ಮಾ.10ರೊಳಗೆ ಪಕ್ಷದ ಕಚೇರಿಗೆ ತಲುಪಿಸಲು ಅವಕಾಶ ನೀಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ತಿಳಿಸಿದ್ದಾರೆ.
ಪ್ರತಿ ಜಿಲ್ಲೆಗೆ ಇಬ್ಬರು ಚುನಾವಣಾ ವೀಕ್ಷಕರನ್ನು ನೇಮಿಸಿರುವ ಕಾಂಗ್ರೆಸ್, ಜಿಲ್ಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಸೂಚಿಸಿದೆ.