ಲೋಕಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇದ್ದು, ದೇಶದ ವಿವಿಧೆಡೆ ದಲಿತರ ಮೇಲಿನ ದೌರ್ಜನ್ಯ ಮತ್ತು ದಾಳಿ ಪ್ರಕರಣಗಳು ನಡೆಯುತ್ತಿರುವ ಸಂದರ್ಭದಲ್ಲಿ ಭಾಗವತ್ ಈ ರೀತಿ ಹೇಳಿದ್ದಾರೆ. ಇದು ದಲಿತರನ್ನು ಓಲೈಸುವ ಪ್ರಯತ್ನ ಎಂದು ವಿಶ್ಲೇಷಿಸಲಾಗಿದೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ದಲಿತ ಸಂತರು ಮತ್ತು ದಲಿತ ಸಮುದಾಯದ ಪ್ರಮುಖರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ವೇದಿಕೆಯಲ್ಲಿ ಸಂತ ರವಿದಾಸ್, ವಾಲ್ಮೀಕಿ ಮತ್ತು ಗೌತಮ ಬುದ್ಧ ಅವರ ಭಾವಚಿತ್ರಗಳನ್ನು ಹಾಕಲಾಗಿತ್ತು.