ಉತ್ತರ– ದಕ್ಷಿಣ ಕಾರಿಡಾರ್ನ ಯಲಚೇನಹಳ್ಳಿ ನಿಲ್ದಾಣದ ಬಳಿ ಹಳಿ ದುರಸ್ತಿಗಾಗಿ ಈ ನಿಲ್ದಾಣಗಳ ನಡುವೆ ಶನಿವಾರ ರಾತ್ರಿ 9ಗಂಟೆಯಿಂದ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಸೋಮವಾರ ಬೆಳಿಗ್ಗೆ 5 ಗಂಟೆಗೆ ಸೇವೆ ಮತ್ತೆ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಈ ಮೊದಲು ಹೇಳಿತ್ತು. ದುರಸ್ತಿ ಕಾರ್ಯ ಅವಧಿಗೆ ಮುನ್ನವೇ ಪೂರ್ಣಗೊಂಡಿದ್ದರಿಂದ ಭಾನುವಾರವೇ ರೈಲು ಸಂಚಾರ ಆರಂಭಿಸಲಾಗಿದೆ.