ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳೊಂದಿಗಿನ ಸಭೆ ನೇರಪ್ರಸಾರ ಮಾಡಲು ಮುಂದಾದ ದೆಹಲಿ ಸರ್ಕಾರ

Last Updated 26 ಫೆಬ್ರುವರಿ 2018, 10:53 IST
ಅಕ್ಷರ ಗಾತ್ರ

ನವದೆಹಲಿ: ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್‌ ಮೇಲೆ ಆಮ್‌ ಆದ್ಮಿ ಪಕ್ಷದ(ಎಎಪಿ) ಇಬ್ಬರು ಶಾಸಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದ ತರುವಾಯ, ಅಧಿಕಾರಿಗಳೊಂದಿಗಿನ ಸಭೆಗಳನ್ನು ನೇರಪ್ರಸಾರ ಮಾಡಲು ದೆಹಲಿ ಸರ್ಕಾರ ಮುಂದಾಗಿದೆ.

‘ಸಭೆಗಳ ನೇರಪ್ರಸಾರದಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಲಿದೆ. ಅಲ್ಲದೆ ಅಧಿಕಾರಿಗಳಿಂದ ಬರುವ ಹಲ್ಲೆಯ ಆರೋಪಗಳನ್ನು ತಪ್ಪಿಸಬಹುದು. ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿಯೇ ಸಭೆಗಳನ್ನು ಬಿತ್ತರಿಸಲು ಚಿಂತನೆ ನಡೆದಿದೆ’ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

‘ಇದಲ್ಲದೆ, ಸರ್ಕಾರದ ಎಲ್ಲ ಕಡತಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಲು ಯೋಚಿಸುತ್ತಿದ್ದೇವೆ. ಇದರಿಂದ ಕಡತಕ್ಕೆ ಯಾರು ಸಹಿ ಮಾಡಿದ್ದಾರೆ, ಮಾಡಿಲ್ಲ ಎಂಬುದು ಜನರೆಲ್ಲರಿಗೂ ತಿಳಿಯಲಿದೆ. ಯಾರು, ಯಾವ ಕಾರಣಕ್ಕಾಗಿ ಕಡತವನ್ನು ತಡೆಹಿಡಿದಿದ್ದಾರೆ ಎಂಬುದು ಸಹ ಗೊತ್ತಾಗಲಿದೆ’ ಎಂದು ಮೂಲಗಳು ಹೇಳುತ್ತಿವೆ.

ಸಭೆಗಳ ನೇರಪ್ರಸಾರ ಮತ್ತು ಕಡತಗಳ ಅಪ್‌ಲೋಡ್‌ಗೆ ಕೇಜ್ರಿವಾಲ್‌ ಸಂಪುಟವು ಒಪ್ಪಿಗೆ ಸೂಚಿಸಿದರೆ, ಸರ್ಕಾರ ಮಾರ್ಚ್‌ನಲ್ಲಿ ಮಂಡಿಸುವ ಬಜೆಟ್‌ನಲ್ಲಿ ಈ ಆಡಳಿತ ಸುಧಾರಣೆಗಳಿಗೆ ಅನುದಾನ ಮೀಸಲಿಡಲು ಯೋಚಿಸಲಾಗಿದೆ.

ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲಿ ಕಳೆದ ಸೋಮವಾರ ನಡೆದ ಸಭೆಯಲ್ಲಿ ಶಾಸಕರಾದ ಪ್ರಕಾಶ್‌ ಜರ್ವಾಲ್‌ ಮತ್ತು ಅಮಾನತ್‌ಉಲ್ಲಾ ಖಾನ್‌ ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದು ಅಂಶು ಪ್ರಕಾಶ್‌ ಆರೋಪಿಸಿದ್ದಾರೆ. ಈ ಇಬ್ಬರು ಶಾಸಕರು ಈಗ ಪೊಲೀಸ್‌ ವಶದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT