ಕೂಡಲೇ ಜೆಸಿಬಿಯಿಂದ ಮಣ್ಣು ಹೊರ ತೆಗೆಯುವ ಕಾರ್ಯಾಚರಣೆ ನಡೆಸಲಾಯಿತು. ಆದರೆ, ಜೆಸಿಬಿಯಿಂದ ಕಾರ್ಯಾಚರಣೆ ನಡೆಸಿದರೆ ಕಾರ್ಮಿಕರಿಗೆ ಗಾಯವಾಗಬಹುದು ಎಂಬ ಭೀತಿಯಲ್ಲಿ, ಅಲ್ಲಿದ್ದ ಜನರು ಸೇರಿ ಮಣ್ಣು ಹೊರತೆಗೆಯಲು ಮುಂದಾದರು.
30 ನಿಮಿಷಗಳ ಪ್ರಯತ್ನದ ಬಳಿಕ ಕಾರ್ಮಿಕರನ್ನು ಹೊರಕ್ಕೆ ತೆಗೆಯಲಾಗಿದ್ದು, ಬಳಿಕ ಆಂಬುಲೆನ್ಸ್ ಮೂಲಕ ಅವರನ್ನು ಉಡುಪಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅವರು ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದರು.