‘ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು. ಕಳೆದ ಒಂದೂವರೆ ದಶಕದಲ್ಲಿ ವೈಮಾನಿಕ ಕ್ಷೇತ್ರ ವೇಗದಲ್ಲಿ ಬೆಳವಣಿಗೆ ಹೊಂದುತ್ತಿದೆ. ಈ ವಿಶೇಷ ವ್ಯವಸ್ಥೆಯಿಂದ ವೈಮಾನಿಕ ಕ್ಷೇತ್ರಕ್ಕೆ ಅಗತ್ಯವಿರುವ ಉತ್ಪನ್ನಗಳು, ಬಿಡಿ ಭಾಗಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ತಯಾರಿಸಲು ಅವಕಾಶವಿದೆ’ ಎಂದು ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.