ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಡೆಸ್ನಾನ’ ವಿವಾದ ಸುಪ್ರೀಂ ಕೋರ್ಟಿಗೆ

Last Updated 27 ಫೆಬ್ರುವರಿ 2018, 20:03 IST
ಅಕ್ಷರ ಗಾತ್ರ

ಪುತ್ತೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ‘ಮಡೆಸ್ನಾನ'ದ ಪರವಾಗಿ ಭಕ್ತರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ.

ಬಂಟ್ವಾಳ ತಾಲ್ಲೂಕಿನ ಮಾಣಿಯ ಪಾರ್ಪಜೆ ವೆಂಕಟ್ರಮಣ ಭಟ್‌ ಮಕರಂದ ಅವರು, ‘ಭಕ್ತನಾದ ನನ್ನ ಮೂಲಭೂತ ಹಕ್ಕನ್ನು ಉಳಿಸಿಕೊಡಬೇಕು’ ಎಂದು ಅರ್ಜಿಯಲ್ಲಿ ಕೇಳಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್‍ನ 7 ನ್ಯಾಯಮೂರ್ತಿಗಳಿರುವ ಪೂರ್ಣಪೀಠ ಈ ಅರ್ಜಿಯನ್ನು ಅಂಗೀಕರಿಸಿದೆ.

‘ಮಡೆಸ್ನಾನ ನನ್ನ ಧಾರ್ಮಿಕ ನಂಬಿಕೆ. ಭಕ್ತರು ಸ್ವಯಂ ನೆಲೆಯಲ್ಲಿ ಇದನ್ನು ಆಚರಿಸುತ್ತಾರೆ. ಹೀಗಾಗಿ ಇದಕ್ಕೆ ಅವಕಾಶ ನೀಡುವಂತೆ ಕೇಳಿಕೊಳ್ಳಲಾಗಿದೆ’ ಎಂದು ವೆಂಕಟ್ರಮಣ ಭಟ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT