ಕಲಬುರ್ಗಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಅಫಜಲಪುರಕ್ಕೆ ಭೇಟಿ ನೀಡಲಿದ್ದು, ಅವರ ಸ್ವಾಗತಕ್ಕೆ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ ಅವರು ಫ್ಲೆಕ್ಸ್ ಹಾಕಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಮಾಲೀಕಯ್ಯ ಗುತ್ತೇದಾರ ಅವರು ‘ದೇವೇಗೌಡ ಹಿರಿಯರು. ಅವರು ಅಧಿಕಾರದಲ್ಲಿ ಇದ್ದಾಗ ಭೀಮಾ ಏತನೀರಾವರಿ ಯೋಜನೆಗೆ ಅನುದಾನ ನೀಡಿದ್ದರು. ಅವರಿಗೆ ಗೌರವ ನೀಡಲು ಹೆಲಿಪ್ಯಾಡ್ ನಲ್ಲಿ ಫ್ಲೆಕ್ಸ್ ಹಾಕಿಸಿದ್ದೇನೆ. ಇದರಲ್ಲಿ ರಾಜಕೀಯ ಇಲ್ಲ’ ಎಂದಿದ್ದಾರೆ.