ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 3,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಒಂದು ವರದಿ. ಆದರೆ ಸರ್ಕಾರಿ ಅಂಕಿಅಂಶಗಳ ಪ್ರಕಾರ ‘ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 2,667’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಹೇಳಿದ್ದಾರೆ! ಈ ಕುರಿತು ಮಾತನಾಡುವಾಗ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಘಟಿಸಿದ ರೈತರ ಆತ್ಮಹತ್ಯೆ ಸಂಖ್ಯೆಯನ್ನು ಸಹ ಉಲ್ಲೇಖಿಸಿದ್ದಾರೆ.