ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ, ‘ಮುಷ್ಕರದಿಂದಾಗಿ ರಾಜ್ಯದಾದ್ಯಂತ ಸುಮಾರು 2 ಲಕ್ಷ ಟಿಪ್ಪರ್ಗಳು ಕೆಲಸ ಇಲ್ಲದೆ ನಿಂತಿವೆ. ಲಕ್ಷಾಂತರ ಕಾರ್ಮಿಕರ ಬದುಕು ದುಸ್ತರವಾಗಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ, ಹೆದ್ದಾರಿಗಳ ಮಧ್ಯೆ ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.