‘ಕೊಳೆಗೇರಿಗಳ ವಿದ್ಯಾವಂತ ಯುವಜನರು ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ. ಅಲ್ಲಿನ ಜನರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯ ನೀಡುತ್ತಿರುವುದು ಉತ್ತಮ ಬೆಳವಣಿಗೆ. ಆದರೆ, ಶಾಲೆ ಬಿಟ್ಟವರಿಗೆ ವಿದ್ಯಾಭ್ಯಾಸ ಮುಂದುವರಿಸುವಂತೆ ಪ್ರೇರಣೆ ನೀಡಬಲ್ಲ ನಾಯಕರ ಕೊರತೆ ಇದೆ. ಕುಡಿಯುವ ನೀರು, ನೈರ್ಮಲ್ಯ ಮತ್ತು ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಸ್ಥಳೀಯ ಮುಖಂಡರಿಗೆ ಕೊಳೆಗೇರಿ ಕಾಯ್ದೆ ಮತ್ತು ಸವಲತ್ತುಗಳ ಬಗ್ಗೆ ಮಾಹಿತಿ ಕೊರತೆ ಇದೆ’ ಎಂದು ತಿಳಿಸಿದರು.