ಮುಂಬೈಯಲ್ಲಿ 2008ರಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದಲ್ಲಿ ಯಾವುದೇ ದ್ವಿಪಕ್ಷೀಯ ಸರಣಿಗಳಲ್ಲಿ ಪಾಲ್ಗೊಂಡಿಲ್ಲ. ಈ ವಿಷಯದ ಕುರಿತ ಪಾಕಿಸ್ತಾನದ ವಾದಕ್ಕೆ ಐಸಿಸಿ ಮತ್ತು ಏಷ್ಯಾ ಕ್ರಿಕೆಟ್ ಸಮಿತಿಯ ಬೆಂಬಲ ಸಿಗುತ್ತಿಲ್ಲ. ಹೀಗಾಗಿ ಏಪ್ರಿಲ್ನಲ್ಲಿ ಕೋಲ್ಕತ್ತದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವುದು ಅನುಮಾನ ಎಂದು ಸೇಥಿ ಹೇಳಿದ್ದಾರೆ. ಭಾರತದಿಂದ ವಿಸಾ ದೊರಕಿಸಿಕೊಡಲು ಐಸಿಸಿ ಮುಂದಾದರೆ ಮಾತ್ರ ಸಭೆಯಲ್ಲಿ ಭಾಗವಹಿಸಲು ಸಾಧ್ಯ ಎಂದು ತಿಳಿಸಿದ್ದಾರೆ.