ಈ ವಿಷಯವನ್ನು ಬಿಸಿಸಿಐ ಅಧ್ಯಕ್ಷ ಸಿ.ಕೆ.ಖನ್ನಾ, ಗುರುವಾರ ತಿಳಿಸಿದ್ದಾರೆ. ಈ ಹಿಂದೆ ಹುದ್ದೆಯಲ್ಲಿದ್ದ ತಮಿಳುನಾಡು ಕ್ರಿಕೆಟ್ ಸಂಸ್ಥೆಯ (ಟಿಎನ್ಸಿಎ) ಕಾಶಿ ವಿಶ್ವನಾಥನ್ ಅವರು ರಾಜೀನಾಮೆ ನೀಡಿದ್ದಾರೆ. ಅವರಿಂದ ತೆರವಾಗಿರುವ ಸ್ಥಾನಕ್ಕೆ ವಿನಯ್ ಅವರನ್ನು ನೇಮಿಸಲಾಗಿದೆ. ಮುಂದಿನ ವಾರ್ಷಿಕ ಸಾಮಾನ್ಯ ಸಭೆಯವರೆಗೂ ವಿನಯ್, ಹಣಕಾಸು ಸಮಿತಿಯ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.