ಕೊಲೆ ಮಾಡುವ ಉದ್ದೇಶದಿಂದಲೇ ಸ್ನೇಹಿತರ ಜತೆ ರಾತ್ರಿ ಮನೆಗೆ ಬಂದಿದ್ದ ಜಗದೀಶ್, ಇಬ್ಬರೂ ಮಕ್ಕಳನ್ನು ಹೊರಗೆ ಕಳುಹಿಸಿದ್ದ. ಬಳಿಕ ಕಮಲಮ್ಮ ಜತೆ ಜಗಳ ತೆಗೆದು, ಚಾಕುವಿನಿಂದ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಕೆಲ ನಿಮಿಷ ಬಿಟ್ಟು ಮನೆಗೆ ಮರಳಿದ ಮಕ್ಕಳು, ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿಯನ್ನು ಸ್ಥಳೀಯರ ಸಹಾಯದಿಂದ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಕಮಲಮ್ಮ ಅಸುನೀಗಿದರು ಎಂದು ಪೊಲೀಸರು ಮಾಹಿತಿ ನೀಡಿದರು.