ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಡದಲ್ಲಿ ನಕ್ಸಲ್‌ ಕಾರ್ಯಾಚರಣೆ: ಪೊಲೀಸರಿಂದ 10 ನಕ್ಸಲರ ಹತ್ಯೆ

Last Updated 2 ಮಾರ್ಚ್ 2018, 6:52 IST
ಅಕ್ಷರ ಗಾತ್ರ

ರಾಯಪುರ: ಶುಕ್ರವಾರ ಬೆಳಗ್ಗೆ ಛತ್ತೀಸಗಡ ಮತ್ತು ತೆಲಂಗಾಣ ಪೊಲೀಸರು ನಕ್ಸಲರ ವಿರುದ್ಧ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 10 ನಕ್ಸಲರು ಮೃತಪಟ್ಟಿದ್ದಾರೆ.

ಛತ್ತೀಸಗಡದ ಬಿಜಾಪುರ ಜಿಲ್ಲೆಯ ನಕ್ಸಲ್‌ ಪೀಡಿತ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಇಲ್ಲಿನ ಪೂಜಾರಿ ಕಾಂಕರ್ ಅರಣ್ಯ ಪ್ರದೇಶದಲ್ಲಿ  ಬೆಳಗಿನ ಜಾವ 6.30ಕ್ಕೆ ನಡೆದ ಕಾರ್ಯಾಚರಣೆಯಲ್ಲಿ 10 ಜನ ನಕ್ಸಲರು ಮೃತಪಟ್ಟಿದ್ದಾರೆ. ಈ ವೇಳೆ ಪೊಲೀಸರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ಬಿಜಾಪುರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮೊಹಿತ್ ಗಾರ್ಗ್ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ನಕ್ಸಲರ ಬಳಿ ಇದ್ದ ಅಪಾರ ಪ್ರಮಾಣದ ಮದ್ದು ಗುಂಡು, ನಾಡ ಬಾಂಬ್‌ ಮತ್ತು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ನಕ್ಸಲರ ಗುರುತು ಪತ್ತೆ ಹಚ್ಚುವ ಕೆಲಸ ಸಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT