ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ಸಿರಿಗೆರೆಯ ತರಳಬಾಳು ಮಠದಿಂದ ಶುಕ್ರವಾರ ಹಮ್ಮಿಕೊಂಡಿದ್ದ ‘ರಾಜಕೀಯ ಶುದ್ಧೀಕರಣ ಪ್ರಯೋಗ– 2018’ ಭ್ರಷ್ಟಾಚಾರ ಮುಕ್ತ ಚುನಾವಣಾ ಜನಜಾಗೃತಿ ಸಮಾರಂಭದಲ್ಲಿ ಕಾಂಗ್ರೆಸ್ ಶಾಸಕ ಎಚ್.ಪಿ.ರಾಜೇಶ್, ಬಿಜೆಪಿ ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹಾಗೂ ಇನ್ನಿತರ ಆಕಾಂಕ್ಷಿಗಳು ಸಾಮೂಹಿಕ ಪ್ರತಿಜ್ಞೆ ಕೈಗೊಂಡರು.